: ದೇವಿಗೆ ಕಾಯಿ, ಕರ್ಪೂರ್ ಸಲ್ಲಿಸಿದ ಭಕ್ತರು
– ಮೆರವಣಿಗೆಗೆ ರಂಗು ನೀಡಿದ ಕೋಲಾಟ, ಡೊಳ್ಳು ಕುಣಿತ
– ಬೆಳಗ್ಗೆಯಿಂದ ಸಂಜೆಯವರೆಗೂ ನಡೆದ ಅಮ್ಮನ ಮೆರವಣಿಗೆ
ಕೊಪ್ಪಳ: ಮೂವತ್ರೋಂಭತ್ತು ವರ್ಷಗಳ ಬಳಿಕ ವೈಭವದಿಂದ ಜರುಗುತ್ತಿರುವ ಹಲಗೇರಿ ದ್ಯಾಮಮ್ಮನ ಜಾತ್ರೆಯ ನಿಮಿತ್ತ ಶುಕ್ರವಾರ ಬೆಳಗ್ಗೆ ದಶಮಿದಿಂಡಿನಲ್ಲಿ ಶ್ರೀ ದ್ಯಾಮಮ್ಮನ ಮೂರ್ತಿ ಮರೆವಣಿಗೆಯೂ ಸಕಲ ವಾದ್ಯಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಬೆಳಗ್ಗೆ ೪ಗಂಟೆಗೆ ದ್ಯಾಮಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ದಶಮಿದಿಂಡಿನಲ್ಲಿ ಬೆಳಗ್ಗೆ ೬ಗಂಟೆಗೆ ಪ್ರಾರಂಭವಾದ ದ್ಯಾಮಮ್ಮನ ಮೂರ್ತಿ ಮೆರವಣಿಗೆಯೂ ಸಂಜೆ ೬ಗಂಟೆವರೆಗೂ ಸಾಗಿತು. ದಾರಿಯುದ್ದಕ್ಕೂ ಮಹಿಳೆಯರು ದೇವಿಗೆ ಕಾಯಿ, ಕರ್ಪೂರ್, ಹೂವು ಸಲ್ಲಿಸಿ ತಾಯಿಗೆ ಕೃಪೆಗೆ ಪಾತ್ರರಾದರು. ನಂತರ ಮೆರವಣಿಗೆಯೂ ಗ್ರಾಮದ ವಿವಿಧ ಬೀದಿಗಳ ಮೂಲಕ ದೇವಸ್ಥಾನ ತಲುಪಿತು.
ಮೆರಗು ನೀಡಿದ ವಾದ್ಯಗಳು :
ಹಲಗೇರಿ ಗ್ರಾಮದಲ್ಲಿ ಸುಮಾರು ಮೂರವರೇ ದಶಕಗಳ ನಂತರ ಆಚರಿಸುತ್ತಿರುವ ಅಮ್ಮನ ಜಾತ್ರೆಗೆ ಪ್ರತಿಯೊಂದು ಮನೆಯೂ ಮದುವಣ ಗಿತ್ತಿಯಂತೆ ಸಿಂಗಾರಗೊಂಡಿದ್ದು, ತಳಿರು ತೋರಣಗಳು ಕೂಡ ಜಾತ್ರೆಗೆ ಮೆರಗು ನೀಡುತ್ತಿವೆ.
ಶ್ರೀ ದ್ಯಾಮಮ್ಮನ ಮೂರ್ತಿ ಮೆರವಣಿಗೆಯಲ್ಲಿ ನಂದಿ ಕೋಲು, ಡೊಳ್ಳು ಕುಣಿತ, ಗೊಂಡಬಾಳ ಗ್ರಾಮದಿಂದ ಕರೆತರಲಾಗಿದ್ದ ಕೋಲಾಟ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಕೆಲ ಯುವಕರು ಉರಿಯುವ ಬಿಸಿಲನ್ನು ಲೆಕ್ಕಿಸದೆ ನಂದಿ ಕೋಲು ಹಾಗೂ ಕೋಲಾಟದಲ್ಲಿ ಹೆಜ್ಜೆ ಹಾಕುವುದರ ಮೂಲಕ ನೋಡುಗರ ಕಣ್ಮನ ಸೆಳೆದರು.
ಒಟ್ಟಾರೆಯಾಗಿ ಒಂಭತ್ತು ದಿನಗಳ ಕಾಲ ವಿಂಜೃಭಣೆಯಿಂದ ಜರುಗಲಿರುವ ಶ್ರೀ ದ್ಯಾಮಮ್ಮ ದೇವಿ ಜಾತ್ರೆಯಲ್ಲಿ ಪ್ರತಿ ನಿತ್ಯ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
ಮೇ.೧೧ರಂದು ನೂತರ ರಥೋತ್ಸವದ ಕಳಸ, ಹಗ್ಗ ಹಾಗೂ ನಂದಿಕೋಲುಗಳನ್ನು ಗ್ರಾಮದ ವಿವಿಧ ಬೀದಿಗಳ ಮೂಲಕ ದೇವಸ್ಥಾನಕ್ಕೆ ತಲುಪಿಸುವ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಶಾಂಭವಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ತ ಪರಿಷತ್ತು ಅಧ್ಯಕ್ಷ ರಾಜಶೇಖರ ಅಂಗಡಿ ಹಾಗೂ ಪ್ರಚಾರ ಸಮಿತಿ ಸದಸ್ಯ ದೇವೇಂದ್ರ ಬಳಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜೃಂಭಣೆಯಿಂದ ಜರುಗಿದ ದ್ಯಾಮಮ್ಮನ ಮೂರ್ತಿ ಮೆರವಣಿಗೆ
Please follow and like us: