ಮಾನವ ಹಕ್ಕುಗಳ ಆಯೋಗದ ಎಡಿಜಿಪಿ ಕೆ.ರಾಮಚಂದ್ರರಾವ್ ಅವರನ್ನು ಗ್ರೇವಿಯನ್ಸ್ ಮತ್ತು ಹ್ಯೂಮನ್ ರೈಟ್ಸ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ಗ್ರೇವಿಯೆನ್ಸ್ ಅಂಡ್ ಹ್ಯೂಮನ್ ರೈಟ್ಸ್ ಎಡಿಜಿಪಿಯಾಗಿದ್ದ ಮಾಲಿನಿ ಕೃಷ್ಣಮೂರ್ತಿಯವರನ್ನು ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಿ.ರೂಪಾ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಡಿ.ರೂಪಾ ಅವರನ್ನು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಿದೆ.
ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ವಿಚಾರವಾಗಿ ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ರೂಪಾ ಜೊತೆಗೆ ಐಜಿಪಿ ಹಾಗೂ ಎಸಿಪಿ ಆಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಐಎಸ್ಡಿಯ ಐಜಿಪಿಯಾಗಿ ವರ್ಗಾವಣೆ ಮಾಡಿದೆ. ಎಸಿಬಿಯ ಐಜಿಪಿಯ ಚಂದ್ರಶೇಖರ್ ಅವರನ್ನು ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಮೈಸೂರು ವಿಭಾಗದ ಐಜಿಪಿ ವಿಪುಲ್ ಕುಮಾರ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡಮಿಯ ಐಜಿಪಿ ಮತ್ತು ಡೈರೆಕ್ಟರ್ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
ಮಂಗಳೂರಿನ ಡಿಐಜಿ ಹಾಗೂ ಕಮಿಷನರ್ ವಿಕಾಸ್ ಕುಮಾರ್ ಅವರನ್ನು, ಕರ್ನಾಟಕ ರಿಸರ್ವ್ ಪೊಲೀಸ್ನ ಡಿಐಜಿ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
ವರ್ಟಿಕ ಕಟಿಯಾರ್ ಅವರನ್ನು ಬೆಂಗಳೂರಿನ ಕ್ರೈಂ ರೆಕಾರ್ಡ್ ಬ್ಯೂರೋದ ಸೂಪರಿಡೆಂಟ್ ಆಫ್ ಪೊಲೀಸ್ ಆಗಿ, ರಂಜಿತ್ ಕುಮಾರ್ ಬಂದರು ಅವರನ್ನು ಮಂಗಳೂರು ಸೌತ್ನ ಎಸಿಪಿ ಸ್ಥಾನದಿಂದ ಭಟ್ಕಳ ಉಪ ವಿಭಾಗದ ಎಸಿಪಿಯಾಗಿ ನೇಮಕ ಮಾಡಲಾಗಿದೆ.