ಭಾಗ್ಯನಗರದಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ

Get real time updates directly on you device, subscribe now.

ಭಾಗ್ಯನಗರ : ಕೊಪ್ಪಳದ ನಗರ ಠಾಣೆಯ ವತಿಯಿಂದ ಭಾಗ್ಯನಗರದ ಸಾರ್ವಜನಿಕರಿಗಾಗಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾಗ್ಯನಗರದ ಕುವೆಂಪು ಸರ್ಕಲ್ ನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ 112 ಗೆ ಕರೆ ಮಾಡಿ ಮಾಹಿತಿ ನೀಡುವುದು ಇಲ್ಲವೇ ಪೊಲೀಸರಿಗೆ ಮಾಹಿತಿ ನೀಡುವುದು ಹಾಗೂ ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು ಎಂದು ಅಧಿಕಾರಿಗಳು ಕರೆ ನೀಡಿದರು. ಪಟ್ಟಣ ಪಂಚಾಯತ್ ಸದಸ್ಯ ರೋಷನ್ ಅಲಿ, ಜಗದೀಶ್ ಮಾಲಗಿತ್ತಿ, ನಗರ ಠಾಣೆಯ ಜಯಪ್ರಕಾಶ್, ಪಿಎಸ್ಐ ಅಮರೇಗೌಡ, ಪಿಎಸ್ಐ ರಾಜಶೇಖರ ಮತ್ತು ಅಪರಾಧ ವಿಭಾಗದ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: