ಅವರು ತಾಲೂಕಿನ ಬೇಳೂರ ಗ್ರಾಮದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧ ವಿತರಣಾ ಶಿಬಿರ ಉದ್ದೇಶಿಸಿ ಮಾತನಾಡುತ್ತಿದ್ದರು.
.jpg)
ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧದ ವಿತರಣೆ ಶಿಬಿರ ಏರ್ಪಡಿಸಿದ್ದು, ಗ್ರಾಮಸ್ಥರು ಇದರ ಸದುಪಯೋಗಪಡೆದುಕೊಂಡು ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ರೋಗದಿಂದ ದೂರ ಇರುವಂತೆ ಸಲಹೆ ನೀಡಿದರು.
ಬೇಳೂರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ರಕ್ತದಾನ ಶಿಬಿರ ಮಾಡುವ ಮೂಲಕ ಸಾಮಾಜಿಕ ಸೇವೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ ಎಂದು ಮನವಿ ಮಾಡಿದರು.
.jpg)
.jpg)
ಭಾರತೀಯ ರೆಡ್ಕ್ರಾಸ್ ಸಂಸ್ಥೆ ಪ್ರತಿ ಮನುಷ್ಯ ಕಷ್ಟಗಳಲ್ಲಿ ಭಾಗಿಯಾಗುವ ಮಹಾದಾಸೆ ಹೊಂದಿದ್ದು, ಜನರ ಸಹಕಾರದೊಂದಿಗೆ ಸಾಮೂಹಿಕ ಸೇವೆಯಲ್ಲಿ ತೊಡಗಿದೆ ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ನಿರ್ದೇಶಕ ಸಂತೋಷ ದೇಶಪಾಂಡೆ ಹೇಳಿದರು.
Please follow and like us: