ಕೊಪ್ಪಳ ಏತ ನೀರಾವರಿ ಯೋಜನೆಯಡಿ ಕುಷ್ಟಗಿ ತಾಲೂಕಿನ ಕಲಾಲ್ಬಂಡಿ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಡೆಲಿವರಿ ಚೇಂಬರ್ ಮತ್ತು ಕಾಲುವೆ ಕಾಮಗಾರಿ ಸ್ಥಳಕ್ಕೆ ಮಂಗಳವಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್ ಅವರು ಮಾತನಾಡಿ, ಕೊಪ್ಪಳ ಏತ ನೀರಾವರಿ ಯೋಜನೆಯ ಕಾಮಗಾರಿಗೆ ಚಾಲನೆ ದೊರೆತಿರುವುದು ಈ ಭಾಗದ ರೈತರಲ್ಲಿ ಸಂತೋಷವನ್ನುಂಟು ಮಾಡಿದೆ. ಅದೇ ರೀತಿ ಯೋಜನೆಯಡಿ ೩ನೇ ಹಂತದ ಕಾಮಗಾರಿಗೂ ಸಹ ಕೂಡಲೆ ಟೆಂಡರ್ ಕರೆದು, ಕಾಮಗಾರಿಗೆ ಚಾಲನೆ ನೀಡಬೇಕಿದೆ. ಅಲ್ಲದೆ ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ಕೊಪ್ಪಳ ಭಾಗದ ಎಡದಂಡೆ ಕಾಲುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದರು.
ಮಾಜಿ ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಬಸವರಾಜ ಹಿಟ್ನಾಳ್, ಸಂಗಣ್ಣ ಕರಡಿ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಪಿಲ್ ಮೋಹನ್, ನೀರಾವರಿ ಇಲಾಖೆ ಕಾರ್ಯದರ್ಶಿ ಗುರುಪಾದಸ್ವಾಮಿ, ಮುಖ್ಯ ಅಭಿಯಂತರ ಸುದರ್ಶನ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. ಯೋಜನೆಯ ಕಾಮಗಾರಿಗಾಗಿ ಭೂಮಿಯನ್ನು ಒದಗಿಸಿದ ರೈತ ವೀರಪ್ಪ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
Please follow and like us: