ನಗರದ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ೬೮ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ನಗರಸಭಾ ಅಧ್ಯಕ್ಷರಾದ ಸುರೇಶ ದೇಸಾಯಿರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು – ಮಹಾತ್ಮಾ ಗಾಂದೀಜಿಯವರ ೧೫೦ನೇ ಜನ್ಮದಿನಾಚರಣೆಯ ಅಂಗವಾಗಿ ಸ್ವಚ್ಛ ಭಾರತ ನಿರ್ಮಾಣದ ಕನಸು ನಾವು ನೀವೆಲ್ಲರೂ ಸೇರಿ ಸುಂದರ ಭಾರತ ನಿರ್ಮಾಣ ಮಾಡಲು ಪಣ ತೊಡಬೇಕು. ಇಂದಿನ ಮಕ್ಕಳು ಮುಂದಿನ ನಾಗರೀಕರು ಹೀಗಾಗಿ ಮಕ್ಕಳು ನೀವೆಲ್ಲಾ ಉತ್ತಮ ಗುಣಮಟ್ಟದ ಅಭ್ಯಾಸ ಮಾಡಿ ನಮ್ಮ ದೇಶದ ಸತ್ಪ್ರಜೆಗಳಾಗಿ ಬಾಳಿ ನಮ್ಮ ದೇಶದ ಅಭಿವೃದ್ದಿಗಾಗಿ ಶ್ರಮಿಸೋಣ ಎಂದು ಕರೆನೀಡಿದರು.
Please follow and like us: