ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು: ನ್ಯಾ. ಮಹಾಂತೇಶ ದರಗದ
ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಹೇಳಿದರು.
ಅವರು ಮಂಗಳವಾರ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.![]()
ಪ್ರತಿಯೊಬ್ಬರೂ ಶುದ್ಧ ಕುಡಿಯುವ ನೀರು, ಗಾಳಿ ಹಾಗೂ ಪರಿಸರವನ್ನು ಪಡೆದುಕೊಂಡು ಗೌರವಯುತವಾಗಿ ಬಾಳುವ ಹಕ್ಕನ್ನು ಹೊಂದಿದ್ದಾರೆ. ಮನುಷ್ಯನು ಜೀವಿಸುವುದಕ್ಕಾಗಿ ಸಂವಿಧಾನದಲ್ಲಿ ಮಾತನಾಡುವ ಹಕ್ಕು, ಧರ್ಮ ಆಚರಣೆ ಮಾಡುವ ಹಕ್ಕು ಹೀಗೆ ಹಲವಾರು ಹಕ್ಕುಗಳನ್ನು ನೀಡಲಾಗಿದೆ. ಮನುಷ್ಯ ಮನ್ಯಷ್ಯನಾಗಿ ಮತ್ತು ಗೌರವಯುತವಾಗಿ ಬದುಕುವುದಕ್ಕಾಗಿಯೇ ಮಾನವ ಹಕ್ಕುಗಳು ಜಾರಿಯಲ್ಲಿವೆ. ದಿನ ನಿತ್ಯದ ಕೆಲಸಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕಾಣುಬಹುದು. ಆದರೆ, ಸಾಮಾನ್ಯವಾಗಿ ಇದರ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ. ಮೊದಲು ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರ್ಥ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಸಾರ್ವಜನಿಕ ಸ್ಥಳಗಳಾದ ದೇವಸ್ಥಾನಗಳಲ್ಲಿ ಕೆಲವರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸುವುದು ಹಾಗೂ ಜಾತಿ ವ್ಯವಸ್ಥೆಯಲ್ಲಿ ಮೇಲು ಕೀಳು ಎಂದು ಭಾವಿಸುವ ವ್ಯವಸ್ಥೆಯೂ ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾದರೆ, ಅವುಗಳಿಗೆ ಶಿಕ್ಷೆ ನೀಡುವ ಅವಕಾಶ ಕಾನೂನಿನಲ್ಲಿದೆ. ಮಾನವ ಹಕ್ಕುಗಳು ಪ್ರತಿಯೊಬ್ಬರಿಗೂ ಸಮಾನವಾಗಿದ್ದು, ಅವುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಈ ದೇಶದ ಪ್ರಜೆಗಳ ಜವಾಬ್ದಾರಿಯಾಗಿದೆ ಎಂದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಸಾಗಿಸಲು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದೆ. ಮಾನವ ಹಕ್ಕುಗಳ ರಕ್ಷಣೆಗೂ ಸಹ ಕಾಯ್ದೆ ರೂಪಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರ ಅರಿವನ್ನು ಹೊಂದುವುದರ ಜೊತೆಗೆ, ಇತರರಿಗೂ ಜಾಗೃತಿ ಮೂಡಿಸಬೇಕು. ಮಕ್ಕಳಿಗೆ ಶಾಲೆ ಬಿಡಿಸುವುದು ಸಹ ಅವರ ಹಕ್ಕುಗಳ ಉಲ್ಲಂಘನೆಯಾಗಿದ್ದು, ಮಕ್ಕಳಿಗೆ ಶಿಕ್ಷಣ ನೀಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.
ಮಂಗಳೂರು ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಂಪಾಲರಾದ ಡಾ ಪ್ರಭುರಾಜ ನಾಯಕ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಾನವ ಹಕ್ಕುಗಳ ದಿನಾಚರಣೆಯ ಈ ವರ್ಷದ ಘೋಷ ವಾಕ್ಯ “ನಮ್ಮ ಹಕ್ಕು ನಮ್ಮ ಭವಿಷ್ಯ” ಎಂಬುವುದಾಗಿದೆ. ರಾಷ್ಟçಗಳು ಹುಟ್ಟುವ ಮೊದಲು, ಸಮಾಜ ಹುಟ್ಟುವ ಮೊದಲು ನಾವು ಇತರೆ ಪ್ರಾಣಿಗಳಂತೆ ಬುದುಕುತ್ತಿದ್ದೆವು. ಮಾನವನ ಭವಿಷ್ಯವನ್ನು ಕಟ್ಟಿಕೊಳ್ಳಲು ಮಾನವ ಹಕ್ಕುಗಳನ್ನು ಆಂಭಿಸಲಾಗಿದೆ. ಸಮಾಜದಲ್ಲಿ ಮನುಷ್ಯ ಘನತೆಯಿಂದ ಬದುಕು ಸಾಗಿಸಲು ಬೇಕಿರುವ ಮೂಲಭೂತ ಅವಶ್ಯಕತೆಗಳನ್ನು ಪಡೆಯುವುದು ಆತನ ಹಕ್ಕು ಆಗಿದೆ. ಯಾವುದೇ ಕಾರಣದಿಂದ ಇದಕ್ಕೆ ತೊಡಕಾದಲ್ಲಿ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ ಆಗುತ್ತದೆ. ಭಾರತದ ಸಂವಿಧಾನದಲ್ಲಿ ಸಂವಿಧಾನ ರಚನಾಕಾರರು ಮಾನವ ಹಕ್ಕುಗಳು ಎಲ್ಲೂ ಉಲ್ಲಂಘನೆಯಾಗದಂತೆ ನಮ್ಮ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಈ ಹಕ್ಕುಗಳ ರಕ್ಷಣೆಗೆ ಸೂಕ್ತ ಕಾನೂನು ರೂಪಿಸಲಾಗಿದೆ. ಮನುಷ್ಯ ತನ್ನ ಘನತೆ ಹೆಚ್ಚಿಸಿಕೊಳ್ಳಬೇಕಾದರೆ ಇನ್ನೊಬ್ಬರ ಹಕ್ಕನ್ನು ಕಾಪಾಡಬೇಕು ಅಂದಾಗ ಮಾತ್ರ ಮಾನವ ಹಕ್ಕುಗಳ ದಿನಾಚರಣೆಗೆ ಮಹತ್ವ ದೊರೆಯುತ್ತದೆ ಎಂದರು.
*ಮೌನಾಚರಣೆ:* ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾರ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೂ ಪೂರ್ವ ಎರಡು ನಿಮಷಗಳ ಮೌನ ಆಚರಿಸಿ, ಅಗಲಿದ ಗಣ್ಯರಿಗೆ ಗೌರವ ನಮನ ಸಮರ್ಪಿಸಲಾಯಿತು.
*ಪ್ರತಿಜ್ಞಾವಿಧಿ ಸ್ವೀಕಾರ:* ಮಾನವ ಹಕ್ಕುಗಳ ದಿನದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಬೋಧಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಇದೇ ಸಂದರ್ಭದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿ, ಕೊಪ್ಪಳ ತಹಶೀಲ್ದಾರ ವಿಠಲ್ ಚೌಗಲೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕೊಪ್ಪಳ ಯುನಿಸೆಫ್ ವಿಭಾಗದ ಹರೀಶ್ ಜ್ಯೋಗಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಕೊಪ್ಪಳ ನಗರದ ವಿವಿಧ ಶಾಲಾ ಕಾಲೇಜುಗಳ ಮಕ್ಕಳು ಉಪಸ್ಥಿತರಿದ್ದರು.

ಪ್ರತಿಯೊಬ್ಬರೂ ಶುದ್ಧ ಕುಡಿಯುವ ನೀರು, ಗಾಳಿ ಹಾಗೂ ಪರಿಸರವನ್ನು ಪಡೆದುಕೊಂಡು ಗೌರವಯುತವಾಗಿ ಬಾಳುವ ಹಕ್ಕನ್ನು ಹೊಂದಿದ್ದಾರೆ. ಮನುಷ್ಯನು ಜೀವಿಸುವುದಕ್ಕಾಗಿ ಸಂವಿಧಾನದಲ್ಲಿ ಮಾತನಾಡುವ ಹಕ್ಕು, ಧರ್ಮ ಆಚರಣೆ ಮಾಡುವ ಹಕ್ಕು ಹೀಗೆ ಹಲವಾರು ಹಕ್ಕುಗಳನ್ನು ನೀಡಲಾಗಿದೆ. ಮನುಷ್ಯ ಮನ್ಯಷ್ಯನಾಗಿ ಮತ್ತು ಗೌರವಯುತವಾಗಿ ಬದುಕುವುದಕ್ಕಾಗಿಯೇ ಮಾನವ ಹಕ್ಕುಗಳು ಜಾರಿಯಲ್ಲಿವೆ. ದಿನ ನಿತ್ಯದ ಕೆಲಸಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕಾಣುಬಹುದು. ಆದರೆ, ಸಾಮಾನ್ಯವಾಗಿ ಇದರ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ. ಮೊದಲು ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರ್ಥ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಸಾರ್ವಜನಿಕ ಸ್ಥಳಗಳಾದ ದೇವಸ್ಥಾನಗಳಲ್ಲಿ ಕೆಲವರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸುವುದು ಹಾಗೂ ಜಾತಿ ವ್ಯವಸ್ಥೆಯಲ್ಲಿ ಮೇಲು ಕೀಳು ಎಂದು ಭಾವಿಸುವ ವ್ಯವಸ್ಥೆಯೂ ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾದರೆ, ಅವುಗಳಿಗೆ ಶಿಕ್ಷೆ ನೀಡುವ ಅವಕಾಶ ಕಾನೂನಿನಲ್ಲಿದೆ. ಮಾನವ ಹಕ್ಕುಗಳು ಪ್ರತಿಯೊಬ್ಬರಿಗೂ ಸಮಾನವಾಗಿದ್ದು, ಅವುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಈ ದೇಶದ ಪ್ರಜೆಗಳ ಜವಾಬ್ದಾರಿಯಾಗಿದೆ ಎಂದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಸಾಗಿಸಲು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದೆ. ಮಾನವ ಹಕ್ಕುಗಳ ರಕ್ಷಣೆಗೂ ಸಹ ಕಾಯ್ದೆ ರೂಪಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರ ಅರಿವನ್ನು ಹೊಂದುವುದರ ಜೊತೆಗೆ, ಇತರರಿಗೂ ಜಾಗೃತಿ ಮೂಡಿಸಬೇಕು. ಮಕ್ಕಳಿಗೆ ಶಾಲೆ ಬಿಡಿಸುವುದು ಸಹ ಅವರ ಹಕ್ಕುಗಳ ಉಲ್ಲಂಘನೆಯಾಗಿದ್ದು, ಮಕ್ಕಳಿಗೆ ಶಿಕ್ಷಣ ನೀಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.
ಮಂಗಳೂರು ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಂಪಾಲರಾದ ಡಾ ಪ್ರಭುರಾಜ ನಾಯಕ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಾನವ ಹಕ್ಕುಗಳ ದಿನಾಚರಣೆಯ ಈ ವರ್ಷದ ಘೋಷ ವಾಕ್ಯ “ನಮ್ಮ ಹಕ್ಕು ನಮ್ಮ ಭವಿಷ್ಯ” ಎಂಬುವುದಾಗಿದೆ. ರಾಷ್ಟçಗಳು ಹುಟ್ಟುವ ಮೊದಲು, ಸಮಾಜ ಹುಟ್ಟುವ ಮೊದಲು ನಾವು ಇತರೆ ಪ್ರಾಣಿಗಳಂತೆ ಬುದುಕುತ್ತಿದ್ದೆವು. ಮಾನವನ ಭವಿಷ್ಯವನ್ನು ಕಟ್ಟಿಕೊಳ್ಳಲು ಮಾನವ ಹಕ್ಕುಗಳನ್ನು ಆಂಭಿಸಲಾಗಿದೆ. ಸಮಾಜದಲ್ಲಿ ಮನುಷ್ಯ ಘನತೆಯಿಂದ ಬದುಕು ಸಾಗಿಸಲು ಬೇಕಿರುವ ಮೂಲಭೂತ ಅವಶ್ಯಕತೆಗಳನ್ನು ಪಡೆಯುವುದು ಆತನ ಹಕ್ಕು ಆಗಿದೆ. ಯಾವುದೇ ಕಾರಣದಿಂದ ಇದಕ್ಕೆ ತೊಡಕಾದಲ್ಲಿ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ ಆಗುತ್ತದೆ. ಭಾರತದ ಸಂವಿಧಾನದಲ್ಲಿ ಸಂವಿಧಾನ ರಚನಾಕಾರರು ಮಾನವ ಹಕ್ಕುಗಳು ಎಲ್ಲೂ ಉಲ್ಲಂಘನೆಯಾಗದಂತೆ ನಮ್ಮ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಈ ಹಕ್ಕುಗಳ ರಕ್ಷಣೆಗೆ ಸೂಕ್ತ ಕಾನೂನು ರೂಪಿಸಲಾಗಿದೆ. ಮನುಷ್ಯ ತನ್ನ ಘನತೆ ಹೆಚ್ಚಿಸಿಕೊಳ್ಳಬೇಕಾದರೆ ಇನ್ನೊಬ್ಬರ ಹಕ್ಕನ್ನು ಕಾಪಾಡಬೇಕು ಅಂದಾಗ ಮಾತ್ರ ಮಾನವ ಹಕ್ಕುಗಳ ದಿನಾಚರಣೆಗೆ ಮಹತ್ವ ದೊರೆಯುತ್ತದೆ ಎಂದರು.
*ಮೌನಾಚರಣೆ:* ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾರ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೂ ಪೂರ್ವ ಎರಡು ನಿಮಷಗಳ ಮೌನ ಆಚರಿಸಿ, ಅಗಲಿದ ಗಣ್ಯರಿಗೆ ಗೌರವ ನಮನ ಸಮರ್ಪಿಸಲಾಯಿತು.
*ಪ್ರತಿಜ್ಞಾವಿಧಿ ಸ್ವೀಕಾರ:* ಮಾನವ ಹಕ್ಕುಗಳ ದಿನದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಬೋಧಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಇದೇ ಸಂದರ್ಭದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿ, ಕೊಪ್ಪಳ ತಹಶೀಲ್ದಾರ ವಿಠಲ್ ಚೌಗಲೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕೊಪ್ಪಳ ಯುನಿಸೆಫ್ ವಿಭಾಗದ ಹರೀಶ್ ಜ್ಯೋಗಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಕೊಪ್ಪಳ ನಗರದ ವಿವಿಧ ಶಾಲಾ ಕಾಲೇಜುಗಳ ಮಕ್ಕಳು ಉಪಸ್ಥಿತರಿದ್ದರು.
Comments are closed.