ವಿವಿಧ ಬೇಡಿಕೆಗೆ ಒತ್ತಾಯಿಸಿ ಸಚಿವರಿಗೆ ಮನವಿ

Get real time updates directly on you device, subscribe now.

ಕನಕಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಪ್ರಮುಖ ಬೇಡಿಕೆಗಳಾದ ಸೇವಾಭದ್ರತೆ, ವೇತನ ಪರಿಷ್ಕರಣೆ, ಆರೋಗ್ಯ ಭದ್ರತೆ, ಅಪಘಾತ ವಿಮೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಚಿವರ ಗಮನಕ್ಕೆ ತಂದರು. ಈ ವೇಳ ಸಚಿವರು, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಸಚಿವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನರೇಗಾ ಸಿಬ್ಬಂದಿಗಳಾದ ಕೊಟ್ರೇಶ್ ಜವಳಿ, ಶಿವಕುಮಾರ್ ಕೆ, ಸಯ್ಯದ್ ತನ್ವೀರ್, ವಿಶ್ವನಾಥ, ಮೇಘರಾಜ್, ಕನಕಪ್ಪ ಚಲುವಾದಿ, ಮೌನೇಶ್, ಮಂಜುನಾಥ, ಉದಯಕುಮಾರ್, ಯೋಗೇಶ್, ವಿಜಯ ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!