ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ

Get real time updates directly on you device, subscribe now.


ಬೀದರ್: ಡಿ. ೨೩- ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತರು ಏಳ್‌ಕೋಟ್ ಏಳ್‌ಕೋಟ್ ಘೇ ಎಂಬ ಜಯ ಘೋಷಣೆಯೊಂದಿಗೆ ಭಂಡಾರ ಎರಚಿ ಜೈಕಾರ ಹಾಕಿದರು.
ಮೆರವಣಿಗೆಯು ದೇವಸ್ಥಾನದಿಂದ ಹೊರಟು ಗಣೇಶ ಕುಂಡ, ಜ್ಯೋತಿಲಿಂಗ ದೇವಸ್ಥಾನ, ತೆಪ್ಪದ ಕುಂಡ ಹಾದು ಘೃತಮಾರಿ ದೇವಸ್ಥಾನಕ್ಕೆ ತಲುಪಿ ವಗ್ಗೆ ಕಡೆಯಿಂದ ಹಾಡು, ಚಾಬುಕ ನೃತ್ಯ ನಡೆಯಿತು.
ಮಲ್ಲಣ್ಣ ದೇವಸ್ಥಾನಕ್ಕೆ ಆಗಮಿಸಿ ಮಂಗಳಾರತಿಯೊಂದಿಗೆ ಮೆರವಣಿಗೆಯ ಸಮಾಪ್ತಿ ಮಾಡಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಮೇತ್ರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂದಾಳ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ ಮತ್ತು ಆಕಾಶ ಹಿರಿವಗ್ಗೆ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಕೂಡ ಇದ್ದರು.
ಜಾತ್ರೆ ನಿಮಿತ್ಯ ಮಹಾರಾ? ತೇಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಮಲ್ಲಣ್ಣನ ಕೃಪೆಗೆ ಪಾತ್ರರಾದರು..

Get real time updates directly on you device, subscribe now.

Comments are closed.

error: Content is protected !!