ಮುಷ್ಕರದಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರು ಮರಳಿ ಕರ್ತವ್ಯಕ್ಕೆ ಹಾಜರಾಗಿ – ಡಾ.ಲಿಂಗರಾಜು

Get real time updates directly on you device, subscribe now.

 ಮುಷ್ಕರದಲ್ಲಿ ಭಾಗವಹಿಸಿದ ಕೊಪ್ಪಳ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಮರಳಿ ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಲಿಂಗರಾಜು ಟಿ ಅವರು ತಿಳಿಸಿದ್ದಾರೆ.

ಜನವರಿ 7 ರಿಂದ ರಾಜ್ಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರ ನಡೆಯುತ್ತಿದ್ದು, ಈ ಮುಷ್ಕರದಲ್ಲಿ ಜಿಲ್ಲೆಯಿಂದ ಆಶಾ ಕಾರ್ಯಕರ್ತೆಯರು ಭಾಗವಹಿಸಿರುತ್ತಾರೆ. ಈಗಾಗಲೆ ಆರೋಗ್ಯ ಸಚಿವರು ತಮ್ಮ ಎಲ್ಲಾ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ತಿಳಿಸಿದ್ದು, ಸಾರ್ವಜನಿಕ ಆರೋಗ್ಯ ಹಿತ ದೃಷ್ಠಿಯಿಂದ ಮುಷ್ಕರದಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರು ಈ ಕೂಡಲೆ ಕರ್ತವ್ಯಕ್ಕೆ ಹಾಜರಾಗುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
****

Get real time updates directly on you device, subscribe now.

Comments are closed.

error: Content is protected !!