ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ —- ಜ. 15 ರಿಂದ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ
: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಮತ್ತು ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ-2025ರ ಅಂಗವಾಗಿ ರಾಷ್ರೀಯ ಜೀವನೋಪಾಯ ಅಭಿಯಾನದಡಿಯಲ್ಲಿ “ಅಸ್ಮಿತೆ” ನಗರ ಮತ್ತು ಗ್ರಾಮೀಣ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಜನವರಿ 15 ರಿಂದ ಜ. 29ರ ವರೆಗೆ ಶ್ರೀ ಗವಿಮಠ ಮಠದ ಜಾತ್ರಾ ಆವರಣದಲ್ಲಿ ಆಯೋಜಿಸಲಾಗಿರುತ್ತದೆ.ಸ್ವ-ಸಹಾಯ ಸಂಘದ ಸದಸ್ಯರುಗಳು ತಯಾರಿಸಿರುವ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಹೆಚ್ಚು ಪ್ರೋತ್ಸಾಹಿಸುವುದರ ಮೂಲಕ ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಹಾಗೂ ಸ್ವ-ಸಹಾಯ ಸಂಘ ಸದಸ್ಯರಿಗೆ ಸ್ವಾವಲಂಭಿ ಬದುಕು, ಸಮೃದ್ದಿ ಬದುಕು, ಸಂತೋಷ ಬದುಕು ಕಟ್ಟಿಕೊಳ್ಳಲು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.