ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Get real time updates directly on you device, subscribe now.

ಪ್ರಕಾಶಕರ ಸಮಸ್ಯೆ ಬಗೆಹರಿಸಲು ಭರವಸೆ

ಬೆಂಗಳೂರು, ಜೂನ್ 03: ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.

ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ ಕಷ್ಟಕರವಾಗಿದ್ದು, ಜ್ಞಾನಭಾಗ್ಯವನ್ನು ನೀಡಬೇಕೆಂದು ನಿಯೋಗ ಕೋರಿತು. ಬಿಬಿಎಂಪಿ ವತಿಯಿಂದ 600 ಕೋಟಿ ರೂ.ಗಳು ಸೆಸ್ ಬಾಕಿ ಇದೆ. ಗ್ರಂಥಾಲಯಗಳ ಶೇ 6 ರಷ್ಟು ಸೆಸ್ ಮೊತ್ತವನ್ನು ಸಂಗ್ರಹ ಮಾಡುತ್ತಿದ್ದು, ಅದನ್ನು ಗ್ರಂಥಾಲಯ ಲೆಕ್ಕಶೀರ್ಷಿಕೆಗೆ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು.

ಆರೋಗ್ಯವಂತ ಸಮಾಜದ ಉಳಿವಿಗೆ ಪುಸ್ತಕ ಅಗತ್ಯ: ಸಿ ಎಂ

ಬೆಂಗಳೂರು- ಪುಸ್ತಕ ಆರೋಗ್ಯವಂತ ಸಮಾಜದ ಅನಿವಾರ್ಯ ಅಂಗ. ಹಾಗಾಗಿ ಪ್ರಕಾಶನ ರಂಗದ ಸಮಸ್ಯೆಗಳನ್ನು ಅಧ್ಯಯನ ಮಾಡಿ ಅದರ ಪರಿಹಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಭೇಟಿ ಮಾಡಿದ ಪ್ರಕಾಶಕರ ನಿಯೋಗಕ್ಕೆ ಭರವಸೆ ನೀಡಿದರು.

ಇಂದು ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದ ಪ್ರಕಾಶಕರ ನಿಯೋಗವನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳು ಪುಸ್ತಕೋದ್ಯಮದ ಮುಂದಿರುವ ಸಮಸ್ಯೆ ಹಾಗೂ ಸವಾಲುಗಳನ್ನು ವಿವರವಾಗಿ ಆಲಿಸಿದರು.

ಮುಖ್ಯಮಂತ್ರಿಗಳು ಮಂಡಿಸಲು ಉದ್ದೇಶಿಸಿರುವ ಬಜೆಟ್ ನಲ್ಲಿ 25 ಕೋಟಿ ರೂಗಳನ್ನು ಒದಗಿಸುವಂತೆ ನಿಯೋಗ ಮನವಿ ಮಾಡಿತು. ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಕಾರ್ಯದರ್ಶಿ ಆರ್ ದೊಡ್ಡೇಗೌಡ ಅವರು ಮಾತನಾಡಿ ಇದು ಅನುಷ್ಟಾನಗೊಂಡಲ್ಲಿ ಸರಕಾರ ಒದಗಿಸಿರುವ ಅನೇಕ ಭಾಗ್ಯಗಳ ಜೊತೆಗೆ ‘ಜ್ಞಾನ ಭಾಗ್ಯ’ವನ್ನೂ ಒದಗಿಸಿದಂತಾಗುತ್ತದೆ ಎಂದು ಗಮನ ಸೆಳೆದರು.

ಪುಸ್ತಕಗಳ ಸಗಟು ಖರೀದಿ ಯೋಜನೆಯನ್ನು ಕಡೆಗಣಿಸಲಾಗಿದ್ದು ಇದರಿಂದ ರಾಜ್ಯದ ಓದುಗರು ಜ್ಞಾನ ವಂಚಿತರಾಗುತ್ತಿದ್ದಾರೆ. ಕಳೆದ ಮೂರು ವರ್ಷದಿಂದ ಸ್ಥಗಿತವಾಗಿರುವ ಸಗಟು ಖರೀದಿ ಯೋಜನೆಗೆ ಚಾಲನೆ ನೀಡಬೇಕು ಹಾಗೂ 500 ಪ್ರತಿಗಳನ್ನು ಕೊಳ್ಳಬೇಕು.

ಬೆಂಗಳೂರು ಮಹಾನಗರಪಾಲಿಕೆ 600 ಕೋಟಿ ರೂಗಳನ್ನು ಗ್ರಂಥಾಲಯ ಕರ ಎಂದು ಸಂಗ್ರಹಿಸಿದ್ದು ಅದನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿಲ್ಲ. ಇದು ಪ್ರಕಾಶನ ರಂಗದ ಸಮಸ್ಯೆ ಮತ್ತಷ್ಟು ಉಲ್ಬಣಿಸಲು ಕಾರಣವಾಗಿದೆ. ಉಕ್ರೇನ್ ಯುದ್ಧದಿಂದಾಗಿ ಉಂಟಾದ ನ್ಯೂಸ್ ಪ್ರಿಂಟ್ ಸಮಸ್ಯೆಯಿಂದ ಮುದ್ರಣ ರಂಗದ ವೆಚ್ಚ ಹಲವು ಪಟ್ಟು ಏರಿದೆ. ಈಗಿರುವ ಬೆಲೆಯ ಮೇಲೆ ಪುಟಕ್ಕೆ 40 ಪೈಸೆ ಹೆಚ್ಚಳವನ್ನು ಮಾಡಬೇಕಾದ ಅಗತ್ಯವಿದೆ. ಇವೆಲ್ಲವನ್ನೂ ಗಮನಿಸಿ ಸರಕಾರ ಪ್ರಕಾಶಕರ ನೆರವಿಗೆ ಬರಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಿಯೋಗದಲ್ಲಿ ಪ್ರಕಾಶಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇಗೌಡ, ಹಿರಿಯ ಪ್ರಕಾಶಕರಾದ ನಿತಿನ್ ಶಾ, ಹೆಚ್ ಕೆ ಲಕ್ಷ್ಮೀನಾರಾಯಣ ಅಡಿಗ, ಜಿ ಎನ್ ಮೋಹನ್, ಮಾನಸ, ಪದಾಧಿಕಾರಿಗಳಾದ ಬಿ ಕೆ ಸುರೇಶ್, ಚಂದ್ರಕೀರ್ತಿ ಬಿ ಎಂ, ಕೆ ಎಸ್ ಮುರಳಿ ಅವರು ಭಾಗವಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಕಾಶಕರ ಸಂಘದ ನಿಯೋಗ ಭೇಟಿ ಮಾಡಿ ಪ್ರಕಾಶನ ರಂಗದ ಸಮಸ್ಯೆಗಳನ್ನು ಚರ್ಚಿಸಿತು. ಚಿತ್ರದಲ್ಲಿ ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇ ಗೌಡ, ಹಿರಿಯ ಪ್ರಕಾಶಕರಾದ ನಿತಿನ್ ಶಾ, ಜಿ ಎನ್ ಮೋಹನ್, ಲಕ್ಷ್ಮೀನಾರಾಯಣ ಅಡಿಗ, ಮಾನಸ ಅವರು ಇದ್ದಾರೆ

Knowledge and Rational thinking must grow: Chief Minister Siddaramaiah

Bengaluru, June 03 : Knowledge and rational thinking must grow opined Chief Minister Siddaramaiah.

He spoke at the meeting held with the delegation of book publishers today.

The delegation bought to the notice of the CM that the situation of Kannada publishers and writers was pathetic. They informed that the cess amount of Rs. 600 crore is pending with the BBMP. A cess of 6 % is collected through libraries which is supposed to be transferred to the library head of account.

Representatives of Sapna Book House, Nirantara Prakashana, Geethanjali Prakashana and other publications were present in the delegation.

Get real time updates directly on you device, subscribe now.

Comments are closed.

error: Content is protected !!
%d bloggers like this: