ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯರಾಧನೆ -ಪಾದಯಾತ್ರೆ

Get real time updates directly on you device, subscribe now.

 ಸಂಸ್ಥಾನ ಶ್ರೀಗವಿಮಠದ ಮ ನಿ ಪ್ರ ಜ ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯರಾಧನೆ ನಿಮಿತ್ಯ ದಿ  ೨೩.೦೩.೨೦೨೫ರಂದು ರವಿವಾರ ಬೆಳಿಗ್ಗೆ ೬:೦೦ ಗಂಟೆಗೆ ಪಾದಯಾತ್ರೆ

ಕೊಪ್ಪಳ : ಸಂಸ್ಥಾನ ಶ್ರೀಗವಿಮಠದ ಮ ನಿ ಪ್ರ ಜ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯರಾಧನೆ ನಿಮಿತ್ಯ ದಿನಾಂಕ ೨೩.೦೩.೨೦೨೫ರಂದು ಬೆಳಿಗ್ಗೆ ೬:೦೦ ಗಂಟೆಗೆ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಜ.ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ ಅಶೋಕ್ ಸರ್ಕಲ್ ಹಾಗೂ ಗಡಿಯಾರ ಕಂಬದ ಮುಖಾಂತರ ಶ್ರೀ ಗವಿಮಠ ತಲುಪುವುದು. ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವರು. ಪಾದಯಾತ್ರೆಯ ನಂತರ ಶ್ರೀ ಗವಿಸಿದ್ಧೇಶ್ವರ ಕತೃ ಗದ್ದುಗೆ ಹಾಗೂ ಶ್ರೀ ಶಿವಶಾಂತವೀರ ಮಹಾಸ್ವಾಮಿಗಳ ಗದ್ದುಗೆಯ ದರ್ಶನ ಪಡೆದು ಧನ್ಯರಾಗುವರು. ಅಂದು ಶ್ರೀಮಠದ ದಾಸೋಹದಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಪ್ರಸಾದ ಇರುತ್ತದೆ ಭಕ್ತಾಧಿಗಳು ಪ್ರಸಾದವನ್ನು ಸ್ವೀಕರಿಬೇಕೆಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!