ಆಸ್ತಿಯ ಎ ಖಾತ, ಬಿ ಖಾತ ಸುಲಭವಾಗಿ ಪಡೆದುಕೊಳ್ಳಿ – ಅಮ್ಜದ್ ಪಟೇಲ್
ಇ-ಖಾತಾ ಅಭಿಯಾನಕ್ಕೆ ಕೊಪ್ಪಳ ನಗರಸಭೆ ಅಧ್ಯಕ್ಷರಿಂದ ಚಾಲನೆ

ಅವರು ಗುರುವಾರ ನಗರದ ಮೂರನೇ ವಾರ್ಡಿನಲ್ಲಿ ಕೊಪ್ಪಳ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕೊಪ್ಪಳ ನಗರಸಭೆ ಕಾರ್ಯಲಯದ ವತಿಯಿಂದ ಇ-ಖಾತಾ ಅಭಿಯಾನ ಮತ್ತು ಎ ಖಾತ ಮತ್ತು ಬಿ ಖಾತ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸುಮಾರು ವರ್ಷಗಳಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ ಖಾತಾ ಮತ್ತು ಬಿ ಖಾತ, ಎಂಬಿ ನಂಬರ್ ನಮೂನೆ 3 ನ್ನು ಪಡೆಯಲು ಸಾರ್ವಜನಿಕರು ಪರದಾಡುವಂತ ಸ್ಥಿತಿ ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಸಾರ್ವಜನಿಕರ ಅನುಕೂಲಕ್ಕಾಗಿ ಮನೆಬಾಗಿಲಿಗೆ ಎ ಖಾತ ಮತ್ತು ಬಿ ಖಾತ ಫಾರಂ ನಂಬರ್ 3ರ ವಿತರಣೆ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದರಿಂದಾಗಿ ತುಂಬಾ ಅನುಕೂಲವಾಗಿದೆ. ನಮ್ಮ ಸರ್ಕಾರವು ಹಮ್ಮಿಕೊಂಡಿರುವ ಈ ಅಭಿಯಾನದಡಿ ಮೂರು ತಿಂಗಳ ಒಳಗಾಗಿ ಕೊಪ್ಪಳ ನಗರದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಎ ಖಾತ ಬಿ ಖಾತದಿಂದ ಜನರಿಗೆ ಸರ್ಕಾರದಿಂದ ವಿವಿಧ ಗೃಹ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯಗಳು ಅತ್ಯಂತ ಸುಲಭವಾಗಿ ಸಿಗಲಿವೆ. ಇಂತಹ ನೂತನ ಯೋಜನೆಯನ್ನು ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದು, ಇದರಿಂದ ಕೊಪ್ಪಳ ನಗರಸಭೆ ವ್ಯಾಪ್ತಿಯ ಸುಮಾರು 8 ಸಾವಿರಕ್ಕೂ ಅಧಿಕ ನಿವೇಶನಗಳು, ಆಶ್ರಯ ಮನೆಗಳಿಗೆ ಅನುಕೂಲವಾಗಲಿದೆ. ಕೊಪ್ಪಳ ನಗರದ ಪ್ರತಿಯೊಬ್ಬರು ತಮ್ಮ ಮನೆಯ ಆಸ್ತಿ ದಾಖಲೆಯ ಪತ್ರಗಳನ್ನು ನೀಡಿ, ಎ ಖಾತ ಮತ್ತು ಬಿ ಖಾತ ಪಡೆದುಕೊಂಡು ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಿಗೆ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಗದುಗಿನಮಠ್, ಪೌರಾಯುಕ್ತರಾದ ಗಣಪತಿ ಪಾಟೀಲ್, ಓಣಿಯ ಹಿರಿಯರಾದ ಖಾಜಾ ಹುಸೇನ್ ರೆವಡಿ, ಸಲೀಂ ಅಳವಂಡಿ, ಹಜರತ್ ಮುಜಾವರ್ ಸೇರಿದಂತೆ ನಗರಸಭೆಯ ಕಂದಾಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು.
Koppal CMC President