ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತ ಪಟ್ಟವರಿಗೆ ಶ್ರದ್ದಾಂಜಲಿ
ಕೊಪ್ಪಳ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತ ಪಟ್ಟವರಿಗೆ ಬಿಜೆಪಿ ಪಕ್ಷದ ವತಿಯಿಂದ ಶ್ರೀ ಬಸವೇಶ್ವರ ಗುಡಿ ಹತ್ತಿರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಅಶೋಕ ಸರ್ಕಲ್ ನಲ್ಲಿ ಮೌನಾಚರಣೆಯ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಉಗ್ರರ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕ್ಯಾಂಡಲ್ ಮಾರ್ಚ್ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಗರದ ಬಸವೇಶ್ವರ ಗುಡಿಯ ಹತ್ತಿರದಿಂದ ಆರಂಭವಾದ ಮೆರವಣಿಗೆ ಅಶೋಕ ಸರ್ಕಲ್ ನವರಿಗೆ ಆಗಮಿಸಿ ಅಶೋಕ ಸರ್ಕಲ್ ನಲ್ಲಿ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು. ಈ ಸಂದರ್ಭದಲ್ಲಿ. ಬಸವರಾಜ್ ಕೌಟರ್ ಸೇರಿದಂತೆ ಬಿಜೆಪಿಯ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.