ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ
– ಭಾರಧ್ವಾಜ್
ಗಂಗಾವತಿ: ಏಪ್ರಿಲ್-೩೦ ಬುಧವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.
ಈ ಪ್ರಯುಕ್ತ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಮಾನತೆ ತತ್ವಗಳ ಕುರಿತು ತಿಳಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಇಂಕಿಲಾಬಿ ಫಯಾಜ್ ಸರಾಜಿದಾರ, ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತ್ರಿ, ಉಪಾಧ್ಯಕ್ಷ ಹನುಮಂತ ಚೌಡಪ್ಪ, ಪ್ರಧಾನ ಕಾರ್ಯದರ್ಶಿ ಮಹೆಬೂಬಸಾಬ್ ಲಾಠಿ, ಜಂಟಿ ಕಾರ್ಯದರ್ಶಿ ಚಾಂದ್ಪಾಷಾ ಮುರಾಹರಿನಗರ, ಸದಸ್ಯರುಗಳಾದ ಹುಲ್ಲೇಶ, ಜಗದೇಶ ಮೇಸ್ತ್ರಿ, ಸೋಮು ಜಿ. ಸೇರಿದಂತೆ ಇತರರು ಪಾಲ್ಗೊಂಡಿದ್ದರು.