ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆ ಆಚರಣೆ. – ಭಾರಧ್ವಾಜ್

0

Get real time updates directly on you device, subscribe now.

ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ

ಗಂಗಾವತಿ: ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ಸಂಘ ರಚನೆ ಮಾಡುವ ಮೂಲಕ ಸಂಘದ ಮೂಲೋದ್ಧೇಗಳಡಿಯಲ್ಲಿ ಕಾನೂನಾತ್ಮಕವಾಗಿ ಸಂಘಟನೆ ಬೆಳೆಸಲು ಸಂಘದ ಪದಾಧಿಕಾರಿಗಳಿಗೆ ತಿಳಿಸಲಾಯಿತು.
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಗೌರವ ಸಲಹೆಗಾರಾದ ಶೇಖರಗೌಡ ಮಾಲಿಪಾಟೀಲ್, ಜನಶಕ್ತಿ ಸಂಘಟನೆಯ ಮುಖಂಡ ಸಿರಾಜ್ ಸಿದ್ದಾಪುರ, ವಿದ್ಯಾರ್ಥಿ ಸಂಘದ ರಾಜ್ಯ ಕಾರ್ಯದರ್ಶಿ ದುರುಗೇಶ ಇವರುಗಳು ಮಾತನಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತ್ರಿ, ಉಪಾಧ್ಯಕ್ಷ ಹನುಮಂತ ಚೌಡಪ್ಪ, ಪ್ರಧಾನ ಕಾರ್ಯದರ್ಶಿ ಮಹೆಬೂಬಸಾಬ್ ಲಾಠಿ, ಜಂಟಿ ಕಾರ್ಯದರ್ಶಿ ಚಾಂದ್‌ಪಾಷಾ ಮುರಾಹರಿನಗರ, ಸದಸ್ಯರುಗಳಾದ ಜಗದೇಶ ಮೇಸ್ತ್ರಿ, ಸೈಯ್ಯದ್ ಯೂಸೂಬ್, ಅನ್ವರ್ ಮೇಸ್ತ್ರಿ, ರಸೂಲ್, ಗೌಸ್, ಮಹೆಬೂಬ, ದೌಲತ್, ರಾಜಾವಲಿ ಸೇರಿದಂತೆ ವಿದ್ಯಾರ್ಥಿ ಮುಖಂಡ ಇಂಕಿಲಾಬಿ ಫಯಾಜ್ ಸರಾಜಿದಾರ, ಇತರರು ಪಾಲ್ಗೊಂಡಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!