ಕೊಪ್ಪಳ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳ

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ತೋಟಗಾರಿಕೆ ಮತ್ತು ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಗುಪ್ತಾ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಕಾರ್ಯದರ್ಶಿಗಳಾದ ಡಾ.ಶಾಮ್ಲಾ ಇಕ್ಬಾಲ್, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಬೆಂಗಳೂರು ಲಾಲ್ ಬಾಗ್ ತೋಟಗಾರಿಕೆ ನಿರ್ದೇಶಕ ಡಿ.ಎಸ್.ರಮೇಶ, ಕೊಪ್ಪಳ ಜಿಲ್ಲಾಧಿಕಾರಿ ನಲಿನ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಬೆಂಗಳೂರು ಲಾಲ್ ಬಾಗ್, ಕ್ಷೇತ್ರ ಮತ್ತು ನರ್ಸರಿ, ತೋಟಗಾರಿಕೆ ಅಪರ ನಿರ್ದೇಶಕ ಕೆ.ಎಂ.ಪರಶಿವಮೂರ್ತಿ, ಲಾಲ್ ಬಾಗ್ ತಾಳೆ ಬೆಳೆ ಯೋಜನೆಯ ತೋಟಗಾರಿಕೆ ಅಪರ ನಿರ್ದೇಶಕ ಡಾ.ಎಂ.ಸೊಬರದ, ಲಾಲ್ ಬಾಗ್ ತೋಟಗಾರಿಕೆ ಅಪರ ನಿರ್ದೇಶಕರು (ಹಣ್ಣುಗಳು), ರಾಷ್ಟ್ರೀಯ ತೋಟಗಾರಿಕೆ ಮಿಷನ್ ಏಜೆನ್ಸಿಯ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿ ಕೆ.ಬಿ.ದುಂಡಿ, ಕಲಬುರಗಿ ವಿಭಾಗದ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ನಾರಾಯಣಪುರ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಂ.ಶಿವಣ್ಣ, ಕೊಪ್ಪಳ ಜಿಲ್ಲಾ ಹಾಪ್ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶೇಖರಗೌಡ ಮಾಲೀಪಾಟಿಲ್, ಅಭಿನವಶ್ರೀ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಕೆ.ಶಿವರಮಪ್ಪ ಅವರು ಭಾಗವಹಿಸುವರು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ.ಸಿ ಉಕ್ಕುಂದ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೆ.ಶಂಕ್ರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.