ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

Get real time updates directly on you device, subscribe now.

ಬೆಂಗಳೂರು:
ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ
ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು.

ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.

ಕೆಯುಡಬ್ಲ್ಯೂಜೆ ಸಂತಾಪ:

ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ
ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!