ವಿವಿಧೆಡೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ: ರೈತರೊಂದಿಗೆ ಚರ್ಚೆ
: ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಗುರುವಾರ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಹಣ್ಣು ಬೆಳೆಗಳ ಸಂಸ್ಕರಣ ಘಟಕಗಳು, ಕೃಷಿ ಹೊಂಡ ಮತ್ತು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿ ರೈತರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರುದ್ರೇಶಪ್ಪ ಟಿ.ಎಸ್., ಉಪನಿರ್ದೆಶಕ ಸಿದ್ದೇಶ್ವರ ಎಲ್., ಮೀನುಗಾರಿಕೆ ಇಲಾಖೆಯ ಉಪನಿರ್ದೆಶಕ ಡಾ. ಶ್ರೀನಿವಾಸ ಕುಲಕರ್ಣಿ, ಕೊಪ್ಪಳ ಕೃಷಿ ತಂತ್ರಜ್ಞರ ಸಂಸ್ಥೆಯ ಉಪಾಧ್ಯಕ್ಷರಾದ ವೀರಣ್ಣ ಕಮತರ, ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಡಾ. ರವಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Comments are closed.