ಪೆಂಕಾಕ್ ಸಿಲತ್ ರಾಷ್ಟಿçÃಯ ಕ್ರೀಡಾಕೂಟ  ರಾಷ್ಟಿçÃಯ ಬೆಳ್ಳಿ – ಕಂಚು ಪಡೆದ ಗೊಂಡಬಾಳ ಸಹೋದರಿಯರು

Get real time updates directly on you device, subscribe now.

ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆದ ೧೩ನೇ ರಾಷ್ಟಿçÃಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಇಲ್ಲಿನ ಪತ್ರಕರ್ತ ಮಂಜುನಾಥ ಗೊಂಡಬಾಳ ಮತ್ತು ಕಾಂಗ್ರೆಸ್ ನಾಯಕಿ ಜ್ಯೋತಿ ಗೊಂಡಬಾಳ ಅವರ ಸುಪುತ್ರಿಯರು ರಾಷ್ಟಿçÃಯ ಪದಕ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
  ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳ ಮತ್ತು ಭಾಗ್ಯನಗರ ಪಯೋನಿಯರ್ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಅಕ್ಷರ ಎಂ. ಗೊಂಡಬಾಳ ಅವರು ಪದಕ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಟ್ಯಾAಡಿAಗ್ (ಸಿಲತ್ ರಿಯಲ್ ಫೈಟ್) ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಜೂನಿಯರ್ ಕೆಟಗರಿ (೬೩-೬೭ ಕೆಜಿ) ಸಾಹಿತ್ಯ ಎಂ. ಗೊಂಡಬಾಳ ಕಂಚಿನ ಪದಕ ಪಡೆದರೆ, ಟೀನ್ ಕೆಟಗರಿ (೫೦-೫೪ ಕೆಜಿ) ಅಕ್ಷರ ಎಂ. ಗೊಂಡಬಾಳ ಬೆಳ್ಳಿ ಪದಕ ಪಡೆದು ರಾಷ್ಟçಮಟ್ಟದಲ್ಲಿ ಮಿಂಚಿದ್ದಾರೆ.
ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ವಿರೇಶ ಮಹಾಂತಯ್ಯನಮಠ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮತ್ತು ರಾಜ್ಯ ಸಿಲತ್ ಸಂಸ್ಥೆ ಜಂಟಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ಸಿಲತ್ ಸಂಸ್ಥೆ ರಾಷ್ಟಿçÃಯ ಹಿರಿಯ ಉಪಾಧ್ಯಕ್ಷೆ ಫಿಲಿಯಾ ಥಾಮಸ್, ರಾಷ್ಟಿçÃಯ ಪೆಂಕಾಕ್ ಸಿಲತ್ ಫೆಡರೇಷನ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ ಟೈಲರ್, ವೆಸ್ಟ್ ಝೋನ್ ಅಧ್ಯಕ್ಷ ಅಲೆಕ್ಸಾಂಡರ್ ಥಾಮಸ್, ಕರ್ನಾಟಕ ರಾಜ್ಯ ಪೆಂಕಾಕ್ ಸಿಲತ್ ಸಂಸ್ಥೆಯ ಅಧ್ಯಕ್ಷ ಜಗನ್ನಾಥ ಆಲಂಪಲ್ಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಹಂಚಿನಾಳ ಜಿಲ್ಲಾ ಅಧ್ಯಕ್ಷ ಮೌನೇಶ ವಡ್ಡಟ್ಟಿ, ಪ್ರಧಾನ ಕಾರ್ಯದರ್ಶಿ ಈರಣ್ಣ ಬದಾಮಿ, ಬಿ. ಎಫ್. ಇಬ್ರಾಹಿಂ ಪದಕ ನೀಡಿ ಗೌರವಿಸಿದರು.

Get real time updates directly on you device, subscribe now.

Comments are closed.

error: Content is protected !!