ನ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಮನವಿ

Get real time updates directly on you device, subscribe now.

ಕೊಪ್ಪಳ 09.:  ನಗರದ ಜಿಲ್ಲಾಡಳಿತ ಭವನದಲ್ಲಿ ಕೊಪ್ಪಳ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದಿಂದ  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರಿಗೆ
ಭಾರತದ ಸುಪ್ರಿಮ್ ಕೋರ್ಟ್ ಮುಖ್ಯ ಮ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಮುಖಾಂತರ ಗೌರವಾನ್ವಿತ ರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ  ಬಿ. ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್, ಕೋರ್ಟ್ ಕಲಾಪದ ವೇಳೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.
ಭಾರತ ಸಂವಿಧಾನ, ನ್ಯಾಯಾಂಗ ವ್ಯವಸ್ಥೆ ಮತ್ತು ಕಾನೂನಿನ ಮೇಲೆ ಅಪಾರ ಗೌರವವಿರುವ ಪ್ರಜೆಗಳಾಗಿ ಈ ಮೂಲಕ ಈ ಮನವಿಯನ್ನು ಮಾನ್ಯರ ಗಮನಕ್ಕೆ ತರುತ್ತಿದ್ದೇವೆ. ಇತ್ತೀಚೆಗೆ, ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆದ ಕೋರ್ಟ್ ಕಲಾಪದ ವೇಳೆ, ವಕೀಲ ರಾಕೇಶ್ ಕಿಶೋರ್ ಎಂಬ ವ್ಯಕ್ತಿಯು ಮಾನ್ಯ ಮುಖ್ಯ ನ್ಯಾಯಮೂರ್ತಿಗಳಾದ  ಬಿ. ಆರ್. ಗವಾಯಿ ಅವರತ್ತ ಶೂ ಎಸೆದು ಅಪಮಾನಕಾರಿ, ಅಶಿಸ್ತಿನ ಕೃತ್ಯವನ್ನು ಎಸಗಿದ್ದಾರೆ.
ಈ ಘಟನೆಯು ವ್ಯಕ್ತಿಗತ ಅವಮಾನವಲ್ಲ, ಇದು ಭಾರತದ ಸಂವಿಧಾನ ಹಾಗೂ ನ್ಯಾಯಾಂಗ ವ್ಯವಸ್ಥೆ ಶ್ರೇಷ್ಠತೆಯ ವಿರುದ್ಧ ನಡೆದ ತೀವ್ರ ಅವಮಾನವಾಗಿದೆ. ಸಂವಿಧಾನದ ಗೌರವ ಮತ್ತು ನ್ಯಾಯದ ನಿಲುವಿಗೆ ಗಂಭೀರ ಬೆದರಿಕೆ. ಕೋರ್ಟ್‌ನೊಳಗೆ ಇಂತಹ ವರ್ತನೆಗಳು ಸಾರ್ವಜನಿಕರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.
ಈ ಕೆಳಗಿನ ಬೇಡಿಕೆಗಳಿಗೆ ಒತ್ತಾಯಿಸಲಾಯಿತು
ವಕೀಲ ರಾಕೇಶ್ ಕಿಶೋರ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.ನ್ಯಾಯಾಂಗ ಸಂಸ್ಥೆಗಳ ಗೌರವ ಮತ್ತು ಶಿಸ್ತು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತಕ್ಷಣದ ಹಾಗೂ ಗಂಭೀರ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸರ್ಕಾರ ಮಟ್ಟದಲ್ಲಿ ನೀತಿ ರೂಪಿಸಬೇಕೆಂದು ಶಿಫಾರಸು ಮಾಡಬೇಕು.
ಭಾರತವು ಕಾನೂನಿನ ಗೌರವಿಸುವ ಪ್ರಜಾಪ್ರಭುತ್ವವಾದ ರಾಷ್ಟ್ರವಾಗಿದ್ದು, ಈ ವ್ಯವಸ್ಥೆಯ ವಿರುದ್ಧ ಇಂತಹ ಅಸಭ್ಯ ಹಾಗೂ ಅಪಮಾನಕಾರಿ ನಡೆಗಳನ್ನು ಖಂಡಿಸಬೇಕು ಹಾಗೂ ಕಾನೂನಿನ ಪ್ರಕಾರ ಸೂಕ್ತವಾಗಿ ಶಿಕ್ಷಿಸಬೇಕೆಂಬುದು ಮನವಿ ಪತ್ರದಲ್ಲಿ ಬರೆಯಲಾಗಿದೆ‌
ಮನವಿ ಪತ್ರವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ಪೂಜಾರ ಓದಿದರೆ.ಅಧ್ಯಕ್ಷರಾದ ಮಂಜುನಾಥ ಮ್ಯಾಗಳಮನಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ  ಹನುಮಂತಪ್ಪ ಛಲವಾದಿ, ಹೇಮಣ್ಣ ಕವಲೂರು, ನಾಗರಾಜನಾಯಕ ಡೊಳ್ಳಿನ,
ಬಾಳಪ್ಪ ಕಾಳೆ,
ಪರಶುರಾಮ ಭಾವಿ,
ಮೋಹನ,  ಚಂದ್ರಕಾಂತ ದೇವರ ಮನಿ,  ಗವಿಸಿದ್ದಪ್ಪ ಹೊಸಮನಿ,  ಅಂದಪ್ಪ ಬಳೂಟಗಿ, ಕೃಷ್ಣಮೂರ್ತಿ, ಶಂಕರ ಚಾಗಿ,  ಕೃಷ್ಣ ರಾಠೋಡ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!