2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟ

0

Get real time updates directly on you device, subscribe now.

ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದ್ದಾರೆ

ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆಯ್ಕೆ ಮಾಡಲಾಗಿದ್ದು,‌ ನಾಲ್ಕೈದು‌ ಬಾರಿ‌ ಸಭೆ ನಡೆಸಿದ ಸದಸ್ಯರು ಅರ್ಹರನ್ನು ‌ಆಯ್ಕೆ ಮಾಡಲು ಸಹಕರಿಸಿದ್ದಕ್ಕೆ‌ ಧನ್ಯವಾದಗಳನ್ನು ಈ‌ ಮೂಲಕ‌ ತಿಳಿಸುತ್ತೇನೆ.‌

ಪ್ರಶಸ್ತಿ ನೀಡಿಕೆ‌ ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೊದಲೇ ನಿರ್ಧರಿಸಿದಂತೆ‌ ಈ ಬಾರಿ‌ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. 13 ಮಂದಿ‌ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ‌‌ ಮಾಡಲಾಗಿದೆ.‌

ಕೊಪ್ಪಳ ‌ಜಿಲ್ಲೆಯ ರಾಜೋತ್ಸವ ಪ್ರಶಸ್ತಿ ಪಡೆದವರ ವಿವರ

ಬಸಪ್ಪ ಭರಮಪ್ಪ ಚೌಡ್ಕಿ  ಕೊಪ್ಪಳ

ದೇವೆಂದ್ರಕುಮಾರ ಪತ್ತಾರ್
ಕೊಪ್ಪಳ

ಶೇಖರಗೌಡ ವಿ ಮಾಲಿಪಾಟೀಲ್
ಕೊಪ್ಪಳ

ಸಾಹಿತ್ಯ
ಪ್ರೊ. ರಾಜೇಂದ್ರ ಚೆನ್ನಿ ಶಿವಮೊಗ್ಗ
ತುಂಬಾಡಿ ರಾಮಯ್ಯ ತುಮಕೂರು
ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ ತುಮಕೂರು
ರಹಮತ್ ತರೀಕೆರೆ ಚಿಕ್ಕಮಗಳೂರು
ಹ.ಮ. ಪೂಜಾರ ವಿಜಯಪುರ

ಜಾನಪದ
ಬಸಪ್ಪ ಭರಮಪ್ಪ ಚೌಡ್ಕಿ
ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು
ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ
ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ
ಚಿತ್ರದುರ್ಗ
ಎಂ. ತೋಪಣ್ಣ
ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ
ವಿಜಯಪುರ
ಶ್ರೀಮತಿ ಸಿಂಧು ಗುಜರನ್
ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ
ಮೈಸೂರು

ಸಂಗೀತ
ದೇವೆಂದ್ರಕುಮಾರ ಪತ್ತಾರ್
ಕೊಪ್ಪಳ
ಮಡಿವಾಳಯ್ಯ ಸಾಲಿ
ಬೀದರ್
ನೃತ್ಯ
ಪ್ರೊ. ಕೆ. ರಾಮಮೂರ್ತಿ ರಾವ್
ಮೈಸೂರು

ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್
ದಕ್ಷಿಣ ಕನ್ನಡ
ಶ್ರೀಮತಿ ವಿಜಯಲಕ್ಷ್ಮೀ ಸಿಂಗ್
ಕೊಡಗು

ಆಡಳಿತ
ಶ್ರೀ ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)

ಆಡಳಿತ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ
ಡಾ. ಆಲಮ್ಮ ಮಾರಣ್ಣ
ತುಮಕೂರು
ಡಾ. ಜಯರಂಗನಾಥ್
ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ
ಶ್ರೀಮತಿ ಸೂಲಗಿತ್ತಿ ಈರಮ್ಮ
ವಿಜಯನಗರ
ಶ್ರೀಮತಿ ಫಕ್ಕೀರಿ
ಬೆಂಗಳೂರು ಗ್ರಾಮಾಂತರ
ಶ್ರೀಮತಿ ಕೋರಿನ್ ಆಂಟೊನಿಯಟ್ ರಸ್ಕೀನಾ
ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ
ಉಡುಪಿ
ಕೋಣಂದೂರು ಲಿಂಗಪ್ಪ
ಶಿವಮೊಗ್ಗ

ಶ್ರೀ ಉಮೇಶ ಪಂಬದ ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
ಕೆ.ದಿನೇಶ್ ಬೆಂಗಳೂರು
ಶಾಂತರಾಜು ತುಮಕೂರು
ಜಾಫರ್ ಮೊಹಿಯುದ್ದೀನ್ ರಾಯಚೂರು
ಪೆನ್ನ ಓಬಳಯ್ಯ ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಹೊರನಾಡು/ ಹೊರದೇಶ
ಪಿ ವಿ ಶೆಟ್ಟಿ (ಮುಂಬೈ)
ಹೊರನಾಡು/ ಹೊರದೇಶ

ಪರಿಸರ
ರಾಮೇಗೌಡ
ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ
ಯಾದಗಿರಿ

ಕೃಷಿ
ಡಾ.ಎಸ್.ವಿ.ಹಿತ್ತಲಮನಿ
ಹಾವೇರಿ
ಎಂ ಸಿ ರಂಗಸ್ವಾಮಿ
ಹಾಸನ

ಮಾಧ್ಯಮ
ಕೆ.ಸುಬ್ರಮಣ್ಯ
ಬೆಂಗಳೂರು
ಅಂಶಿ ಪ್ರಸನ್ನಕುಮಾರ್
ಮೈಸೂರು
ಬಿ.ಎಂ ಹನೀಫ್
ದಕ್ಷಿಣ ಕನ್ನಡ
ಎಂ ಸಿದ್ಧರಾಜು
ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ
ರಾಮಯ್ಯ ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ
ಡಾ. ಆರ್. ವಿ ನಾಡಗೌಡ ಗದಗ

 

ಸಹಕಾರ
ಶೇಖರಗೌಡ ವಿ ಮಾಲಿಪಾಟೀಲ್
ಕೊಪ್ಪಳ

ಯಕ್ಷಗಾನ
ಕೋಟ ಸುರೇಶ ಬಂಗೇರ
ಉಡುಪಿ
ಐರಬೈಲ್‌ಆನಂದ ಶೆಟ್ಟಿ
ಉಡುಪಿ
ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ)
ಉತ್ತರ ಕನ್ನಡ

ಬಯಲಾಟ
ಗುಂಡೂರಾಜ್
ಹಾಸನ

ರಂಗಭೂಮಿ
ಹೆಚ್.ಎಂ. ಪರಮಶಿವಯ್ಯ
ಬೆಂಗಳೂರು ದಕ್ಷಿಣ (ರಾಮನಗರ)
ಎಲ್.ಬಿ.ಶೇಖ್ (ಮಾಸ್ತರ್)
ವಿಜಯಪುರ
ಬಂಗಾರಪ್ಪ ಖುದಾನ್‌ಪುರ
ಬೆಂಗಳೂರು
ಮೈಮ್ ರಮೇಶ್
ದಕ್ಷಿಣ ಕನ್ನಡ
ಶ್ರೀಮತಿ ಡಿ.ರತ್ನಮ್ಮ ದೇಸಾಯಿ
ರಾಯಚೂರು

ಶಿಕ್ಷಣ
ಡಾ. ಎಂ.ಆರ್. ಜಯರಾಮ್
ಬೆಂಗಳೂರು
ಡಾ. ಎನ್ ಎಸ್ ರಾಮೇಗೌಡ
ಮೈಸೂರು
. ಎಸ್. ಬಿ. ಹೊಸಮನಿ
ಕಲಬುರಗಿ
ಶ್ರೀಮತಿ ರಾಜ್ ಶ್ರೀ ನಾಗರಾಜು
ಬೆಳಗಾವಿ

ಕ್ರೀಡೆ
ಆಶೀಶ್ ಕುಮಾರ್ ಬಲ್ಲಾಳ್
ಬೆಂಗಳೂರು
ಎಂ ಯೋಗೇಂದ್ರ
ಮೈಸೂರು
ಡಾ. ಬಬಿನಾ ಎನ್.ಎಂ (ಯೋಗ)
ಕೊಡಗು

ನ್ಯಾಯಾಂಗ
ನ್ಯಾ. ಶ್ರೀ ಪಿ.ಬಿ. ಭಜಂತ್ರಿ (ಪವನ್ಕುಮಾರ್ ಭಜಂತ್ರಿ )
ಬಾಗಲಕೋಟೆ

ಶಿಲ್ಪಕಲೆ
ಬಸಣ್ಣ ಮೋನಪ್ಪ ಬಡಿಗೇರ
ಯಾದಗಿರಿ
ಶ್ರೀ ನಾಗಲಿಂಗಪ್ಪ ಜಿ ಗಂಗೂರ
ಬಾಗಲಕೋಟೆ

ಚಿತ್ರಕಲೆ
ಬಿ. ಮಾರುತಿ
ವಿಜಯನಗರ

ಕರಕುಶಲ
ಶ್ರೀಮತಿ ಎಲ್. ಹೇಮಾಶೇಖರ್
ಮೈಸೂರು

ನ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಗ್ಗೆ 8.30ಗಂಟೆಗೆ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!