ಇದು ಆತ್ಮಾವಲೋಕನದ ಕಾಲ -ಈಶ್ವರ ಹತ್ತಿ
ಕೊಪ್ಪಳ: ಇದು ವಿದ್ಯಾರ್ಥಿಗಳ ಹಾಗೂ ಕನ್ನಡ ಶಾಲೆಗಳ ಸ್ಥಿತಿಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು.
ನಗರದಲ್ಲಿ ಶನಿವಾರ ಸಿವಿಸಿ ಫೌಂಡೇಶನ್ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಚಿತ್ರಕಲಾ ನೈಪುಣ್ಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಾತೃ ಭಾಷೆಯಲ್ಲಿ ಓದಿದರೆ ಬುದ್ಧಿ ಬಲಿಯುತ್ತದೆ. ವಿದ್ಯಾರ್ಥಿಗಳು ಓದುವ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮೊಬೈಲ್ ಫೋನ್ ಗಿಳಿನಿಂದ ದೂರ ಇರಬೇಕು. ಕನ್ನಡ ಮಾತನಾಡಬೇಕು. ಕನ್ನಡ ಅಂಕಿ ಬಳಸಬೇಕು ಎಂದು ಕರೆ ಕೊಟ್ಟರು.