ಬೈಕ್‌ಗೆ ಬೊಲೆರೋ ಢಿಕ್ಕಿ: ಮೂವರು ಯುವಕರ  ಸಾವು

Get real time updates directly on you device, subscribe now.

ಕೊಪ್ಪಳ : ಕೊಪ್ಪಳದಲ್ಲಿ ನಡೆದ ಬೀಕರ  ಅಪಘಾತಕ್ಕೆ ಮೂವರು ಯುವಕರು ಬಲಿಯಾಗಿದ್ದಾರೆ.  ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಾಹುಸೇನ್(18), ಆಸೀಫ್(16) ಮತ್ತು ವಾಜಿದ್(19) ಮೃತರು. ಈ ಮೂವರು ಶ್ರೀರಾಮನಗರದಿಂದ ಹೊಸಹಳ್ಳಿಗೆ ಬೈಕ್‌ನಲ್ಲಿ ಹೋಗುವಾಗ ಇಂದರಗಿ ಗ್ರಾಮದ ಸಮೀಪ ಬೊಲೆರೋ ವಾಹನ ಢಿಕ್ಕಿಯಾಗಿದೆ.ಅಪಘಾತದ ಬಳಿಕ ಬೊಲೆರೋ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Get real time updates directly on you device, subscribe now.

Comments are closed.

error: Content is protected !!