ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸಲು ಸಂಪೂರ್ಣವಾಗಿ ವಿಫಲ- ನವೀನಕುಮಾರ ಈ ಗುಳಗಣ್ಣವರ
ಇಂದು ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸಲು ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ನೀಡುವ ಯಾವುದೇ ಪರಿಣಾಮಕಾರಿ ಯೋಜನೆಗಳು ಈ ಬಜೆಟ್ನಲ್ಲಿ ಕಾಣಿಸುತ್ತಿಲ್ಲ. ವಿದ್ಯಾರ್ಥಿಗಳಲ್ಲಿಯೂ ಕೂಡ ಧರ್ಮ ಆದರದ ಮೇಲೆ ಸೌಲಭ್ಯಗಳನ್ನು ಘೋಷಿಸಿರುವುದು ಖಂಡನಿಯ.

Budget has completely failed to meet the expectations of the common people – Naveen Kumar, this gulagannavara
ಕೊಪ್ಪಳ ದ ಕಾರ್ಖಾನೆ ಗಳ ಕುರಿತು ಆಗುತ್ತಿರುವ ಅನಾಹುತಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ, ಕೃಷ್ಣ ಬಿ ಸ್ಕೀಮ್ ಕೊಪ್ಪಳ ಏತ ನೀರಾವರಿ ಯೋಜನೆ ಕೇವಲ ಘೋಷಣೆ ಗಳಾಗಿ ಉಳಿದಿವೆ.
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕೃಷ್ಣಾ ನದಿಯಿಂದ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸುಮಾರು ₹1900 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನ ಆಗಿಲ್ಲ. ಇತ್ತೀಚಿನ ರಾಜ್ಯ ಬಜೆಟ್ನಲ್ಲಿ ಈ ಯೋಜನೆಯ ಪ್ರಗತಿ ಅಥವಾ ಮುಂದಿನ ಅನುದಾನದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಲಾಗಿಲ್ಲ. ಯಲಬುರ್ಗಾ ಭಾಗದ ರೈತರು ಈ ಯೋಜನೆಗೆ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದರು.
ಕೇವಲ ಘೋಷಣೆಗಳು ಮತ್ತು ಭರವಸೆಗಳಿಂದ ಕೂಡಿದ ಈ ಬಜೆಟ್ ರಾಜ್ಯದ ಆರ್ಥಿಕ ಸ್ಥಿತಿಯನ್ನು ಇನ್ನಷ್ಟು ದುರ್ಬಲಗೊಳಿಸುವ ಸಾಧ್ಯತೆ ಇದೆ. ಯುವಕರಿಗೆ ಉದ್ಯೋಗ ಸೃಷ್ಟಿ, ರೈತರ ಸಂಕಷ್ಟ ಪರಿಹಾರ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಅಗತ್ಯವಾದ ಗಂಭೀರ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿಲ್ಲ.
ನವೀನಕುಮಾರ ಈ ಗುಳಗಣ್ಣವರ
ಬಿಜೆಪಿ ಜಿಲ್ಲಾಧ್ಯಕ್ಷರು ಕೊಪ್ಪಳ
Comments are closed.