ವಾರ್ತಾ ಇಲಾಖೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

0

Get real time updates directly on you device, subscribe now.

ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಬರೆದ, ನೊಂದವರ ಮತ್ತು ನೋವುಂಡವರ ಪಾಲಿನ ಭಾರತದ ಭಾಗ್ಯವಿಧಾತ, ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಂಗಳವಾರ ಆಚರಿಸಲಾಯಿತು.
ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಾರ್ತಾ ಇಲಾಖೆಯ ಸಿಬ್ಬಂದಿ ತಿಪ್ಪಯ್ಯ ನಾಯ್ಡು ಎನ್., ಹೊರಗುತ್ತಿಗೆ ಸಿಬ್ಬಂದಿ ಮಂಜುನಾಥ, ಅಪ್ರೆಂಟಿಶಿಪ್ ಅಭ್ಯರ್ಥಿ ಕಿರಣ್ ಕುಮಾರ್ ಮತ್ತು ಲಕ್ಷ್ಮೀಕಾಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Koppal Information and Public Relations Department

Get real time updates directly on you device, subscribe now.

Leave A Reply

Your email address will not be published.

error: Content is protected !!