ಮಾಹಿತಿ ನೀಡದ ಕಲ್ಬುರ್ಗಿ ಜಿ.ಪಂ. ಉಪ ಕಾರ್ಯದರ್ಶಿ ಸೇರಿ, 18 ಅಧಿಕಾರಿಗಳಿಗೆ ದಂಡ: ಬಿ. ವೆಂಕಟಸಿಂಗ್
: ಸಕಾಲಕ್ಕೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸುವುದು ಸೇರಿದಂತೆ ವಿಚಾರಣೆಗೆ ಗೈರು ಹಾಜರಾಗಿ ಆಯೋಗದ ನೋಟಿಸ್ಗೆ ಸ್ಪಂದನೆ ನೀಡದ ಕಾರಣ ಕಲ್ಬುರ್ಗಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಹಾಗೂ ಗಂಗಾವತಿ ತಾಲೂಕು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ಪಾಲಾನಾ ಅಭಿಯಂತರ ದೇವಣ್ಣ ಕಟ್ಟಿ, ರಾಯಚೂರು ತಾಲೂಕು ಗ್ರೇಡ್- 2 ತಹಸೀಲ್ದಾರ್ ಪರಶುರಾಮ್ ಸೇರಿ ಹಲವು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತ ಕಾರ್ಯದರ್ಶಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಲ್ಬುರ್ಗಿ ಪೀಠ ದಿಂದ ದಂಡ ವಿಧಿಸಿ ಆದೇಶ ಮಾಡಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ ಸಿಂಗ್ ಅವರು ತಿಳಿಸಿದ್ದಾರೆ.
ಏಪ್ರೀಲ್ ತಿಂಗಳಲ್ಲಿ 564 ಪ್ರಕರಣಗಳು ವಿಚಾರಣೆಗೆ ಕೈಗೆತ್ತಿಕೊಂಡು 229 ಪ್ರಕರಣಗಳು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾವು ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟು 3,084 ಪ್ರಕರಣಗಳು ಕೈಗೆತ್ತಿಕೊಂಡು 88 ದಿನ ವಿಚಾರಣೆ ನಡೆಸಿ 1,308 ಪ್ರಕರಣಗಳು ವಿಲೇವಾರಿ ಮಾಡಿರುವುದಾಗಿ ಆಯುಕ್ತರಾದ ಬಿ.ವೆಂಕಟಸಿಂಗ್ ತಿಳಿಸಿದ್ದಾರೆ.
ಪ್ರಕರಣಗಳ ತ್ವರಿತ ವಿಲೇವಾರಿಗೆ ಅನೂಕೂಲವಾಗಲು ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ ಕುರಿತು ಅರಿವು ಮುಡಿಸಲು ಈಗಾಗಲೇ ಬಳ್ಳಾರಿ, ಬೀದರ್, ಕಲ್ಬುರ್ಗಿ ಹಾಗೂ ಕೊಪ್ಪಳದಲ್ಲಿ ಕಾರ್ಯಗಾರ ನಡೆಸಿದ್ದು ಈ ತಿಂಗಳ 30 ರಂದು ವಿಜಯನಗರ ಜಿಲ್ಲೆಯಲ್ಲಿ ಕಾರ್ಯಗಾರ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.