ಸಚಿವ ಶಿವರಾಜ್ ತಂಗಡಗಿ ಪುತ್ರ ಶಶಾಂಕ್ ನಿಶ್ಚಿತಾರ್ಥ ಕಾರ್ಯಕ್ರಮ

ಕೊಪ್ಪಳ ; ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿಯವರ ಹಿರಿಯ ಪುತ್ರ ಶಶಾಂಕ್ ಇವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಮೈದಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಂಪುಟದ ಹಿರಿಯ ಸಚಿವರಾದ ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ , ಸಂಸದ ರಾಜಶೇಖರ ಹಿಟ್ನಾಳ್ ಸೇರಿದಂತೆ ಸಂಪುಟದ ಸಚಿವರು ಹಾಗೂ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು, ಆಗಮಿಸಿ ಶುಭ ಹಾರೈಸಿದರು.