ಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

0

Get real time updates directly on you device, subscribe now.

ಬೆಂಗಳೂರು:
ಅಂತರರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ, ಪ್ರಗತಿಪರ ಚಿಂತಕ ಕೆ.ಟಿ. ಶಿವಪ್ರಸಾದ್ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಅವರು ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ರೈತ ಹಾಗೂ ದಲಿತ ಚಳವಳಿಗಳೊಂದಿಗೆ ನಿಕಟವಾಗಿ ಗುರುತಿಸಿಕೊಂಡಿದ್ದ ಶಿವಪ್ರಸಾದ್ ಅವರು ತಮ್ಮ ಕಲೆಯ ಮೂಲಕ ಸಾಮಾಜಿಕ ಬದ್ಧತೆಯನ್ನು ಅಭಿವ್ಯಕ್ತಿಸಿದ ಅಪರೂಪದ ಕಲಾವಿದರಾಗಿದ್ದರು.
ಖ್ಯಾತ ಉದ್ಯಮಿ ಕಾರ್ಲೆ ಅವರ ಪುತ್ರರಾಗಿದ್ದ ಅವರು ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಆಪ್ತ ಸ್ನೇಹಿತರಾಗಿಯೂ ಪರಿಚಿತರಾಗಿದ್ದರು.

ಸಂತಾಪ:
ಕೆ.ಟಿ. ಶಿವಪ್ರಸಾದ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಕೆ.ಟಿ. ಶಿವಪ್ರಸಾದ್ ಅವರು ಕೇವಲ ಪ್ರತಿಭಾವಂತ ಚಿತ್ರಕಲಾವಿದರಷ್ಟೇ ಅಲ್ಲ, ಸಮಾಜಮುಖಿ ಚಿಂತನೆಗಳನ್ನು ತಮ್ಮ ಕಲೆಯ ಮೂಲಕ ಜನರಿಗೆ ತಲುಪಿಸಿದ ಅಪರೂಪದ ಸೃಜನಶೀಲ ವ್ಯಕ್ತಿತ್ವವಾಗಿದ್ದರು. ಅವರ ನಿಧನದಿಂದ ಕರ್ನಾಟಕದ ಸಾಂಸ್ಕೃತಿಕ ಮತ್ತು ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಅಗಲಿದ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಅವರು ಪ್ರಾರ್ಥಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!