ಲೆಕ್ಕ ಪರಿಶೋಧನೆಗೆ ಅಗತ್ಯ ದಾಖಲಾತಿ ಸಲ್ಲಿಸಿ ತಿರುವಳಿಗೆ ಕ್ರಮ ಕೈಗೊಳ್ಳಿರಿ :ಜಿ.ಪಂ ಸಿಎಒ ಅಮೀನ್‌ ಅತ್ತಾರ

Get real time updates directly on you device, subscribe now.

ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ತಾಲೂಕ ಮಟ್ಟದ ಅಡಹಾಕ್ ಪೂರ್ವಭಾವಿ ಸಭೆ

ಕೊಪ್ಪಳ :-2014-15 ನೇ ಸಾಲಿನ ಗ್ರಾಮ ಪಂಚಾಯತಿಗಳ ಬಾಕಿ ಉಳಿಸಿಕೊಂಡಿರುವ ಕಂಡಿಕೆಗಳ ತಿರುವಳಿಗಳ ಕುರಿತು ದಿನಾಂಕ :24-11-223ರಂದು ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಅಡಹಾಕ್ ಪೂರ್ವಭಾವಿ ಸಭೆಗೆ ಜಿಲ್ಲಾ ಪಂಚಾಯತಿಯ ಮುಖ್ಯಲೆಕ್ಕಾಧಿಕಾರಿಗಳಾದ .ಅಮೀನ್‌ ಅತ್ತಾರ ರವರು ಭಾಗವಹಿಸಿ ವಿವಿಧ ಗ್ರಾಮ ಪಂಚಾಯತಿಗಳಿಗೆ ನಿಯಮಾನುಸಾರ ದಾಖಲಾತಿಗಳನ್ನು ಸಲ್ಲಿಸುವಂತೆ ಹಾಗು 2014-15ನೇ ಸಾಲಿನ ಕಂಡಿಕೆಗಳನ್ನು ತಿರುವಳಿಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 2014-15ನೇ ಸಾಲಿನ ಎಲ್ಲಾ ಕಂಡಿಕೆಗಳನ್ನು ತಿರುವಳಿಗೊಳಿಸಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗು ಸಹಾಯಕ ಲೆಕ್ಕಾಧಿಕಾರಿಗಳಿಗೆ ಸೂಚಿಸಿದರು.
ಅಡಹಾಕ್‌ ಸಭೆಯಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಲೆಕ್ಕಶಾಖೆಯ ಕಿರಣ್, ಗ್ರಾಮ ಪಂಚಾಯತಿಗಳ ಪಿಡಿಒಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: