ಬಿಜೆಪಿ ಬಿಡಲ್ಲ ಕರಡಿ ಸ್ಪಷ್ಟನೆ

Get real time updates directly on you device, subscribe now.


ಕನಕಗಿರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲಿ, ಇಲ್ಲದಿರಲಿ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಬಿಡಲ್ಲ ಎಂದು ಸಂಸದ ಕರಡಿ ಸಂಗಣ್ಣ ಸ್ಪಷ್ಟ ಪಡಿಸಿದರು.
ತಮ್ಮನ್ನು ಭೇಟಿಯಾದ ಪತ್ರಕರ್ತರ ಜತೆಗೆ ಅವರು ಶುಕ್ರವಾರ ಮಾತನಾಡಿದರು. ಎರಡು ಸಲ ಸಂಸದರಾಗಿ ಕೆಲಸ ಮಾಡಿರುವ ತೃಪ್ತಿ ತಮಗಿದೆ, ಜಗತ್ತು ಮೆಚ್ಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ತಿಳಿಸಿದರು. ತಾವು ಕಾಂಗ್ರೆಸ್ ಸೇರುವುದಾಗಿ ಹೇಳಿರುವ ಸಚಿವ ಶಿವರಾಜ ತಂಗಡಗಿ ಅವರಿಗೆ ಯಾವಾಗ ಕನಸು ಬಿತ್ತು ಎಂದು ಪ್ರಶ್ನಿಸಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಬಯಸಿರುವೆ, ಸಾಮಾನ್ಯ ವ್ಯಕ್ತಿಗೂ ಟಿಕೆಟ್ ನೀಡಿದರೂ ಪಕ್ಷದ ಪರವಾಗಿ ಕೆಲಸ ಮಾಡುವ ಇದರಲ್ಲಿ ಯಾವುದೇ ಸಂಶಯ ಇಲ್ಲ, ಕಾಂಗ್ರೆಸ್ ಸೇರ್ಪಡೆ ವಿಷಯ ಬರೀ ವದಂತಿ ಎಂದು ಮಾಹಿತಿ ನೀಡಿದರು.

Get real time updates directly on you device, subscribe now.

Comments are closed.

error: Content is protected !!
%d bloggers like this: