ಪತ್ರಿಕಾ ವಿತರಕರಿಗೆ ಯೋಜನೆ ಜಾರಿ… ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕೆಯುಡಬ್ಲ್ಯೂಜೆ, ವಿತರಕರ ಒಕ್ಕೂಟ ಕೃತಜ್ಞತೆ

Get real time updates directly on you device, subscribe now.

ಬೆಂಗಳೂರು:
ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ರೂ, ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಸರ್ಕಾರ ಜಾರಿ ಮಾಡಲು ಸಹಕಾರ ನೀಡಿದ ಕಾರ್ಮಿಕ ಇಲಾಖೆಯ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಕಾರ್ಮಿಕ ಭವನದಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು, ಪ್ರತಿ ಜಿಲ್ಲೆಯಲ್ಲಿಯೂ ಪತ್ರಿಕಾ ವಿತರಕರ ನೋಂದಣಿ ಮಾಡಿ ಹೊಸ ಯೋಜನೆಗೆ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದರು.

ವಿತರಕರು ಅಪಘಾತ ಮತ್ತಿತರ ಸಂಕಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ನೆರವಾಗಲು ಯಾವುದೇ ಯೋಜನೆಗಳು ಇರಲಿಲ್ಲ. ಕಾರ್ಮಿಕ ಇಲಾಖೆ ಯೋಜನೆ ವ್ಯಾಪ್ತಿಗೆ ತರುವ ಮೂಲಕ ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಕೆಲಸವನ್ನು ಮಾಡಲಾಗಿದೆ ಎಂದರು.

ಹೊಸ ಯೋಜನೆಯ ಜಾರಿಗೆ ವಿತರಕರ ಸಹಕಾರ ಅಗತ್ಯವಾಗಿದೆ. ಯೋಜನೆ ಸದುಪಯೋಗಪಡಿಸಿಕೊಳ್ಳಲು ಸಂಘಟಿತರಾಗಿ ಮುಂದೆ ಬರುವಂತೆ ಕರೆ ನೀಡಿದರು.

Get real time updates directly on you device, subscribe now.

Comments are closed.

error: Content is protected !!
%d bloggers like this: