ಸರ್ವಜ್ಞರ ತ್ರಿಪದಿಗಳ ಮೌಲ್ಯವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು: ತಹಶೀಲ್ದಾರ ವಿಠ್ಠಲ್ ಚೌಗಲಾ

Get real time updates directly on you device, subscribe now.

ಸಂತ ಕವಿ ಎನಿಸಿದ ಸರ್ವಜ್ಞರ ವಚನಗಳು ಜೀವನದ ಆದರ್ಶ, ಮೌಲ್ಯಗಳನ್ನು ಒಳಗೊಂಡಿದ್ದು, ಅವುಗಳನ್ನು ಅಧ್ಯಯನ ಮಾಡುವುದರ ಮೂಲಕ, ನಾವೆಲ್ಲರೂ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ತಹಶೀಲ್ದಾರರಾದ ವಿಠ್ಠಲ್ ಚೌಗಲಾ ಅವರು ಹೇಳಿದರು.
ಮಂಗಳವಾರದAದು ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂತ  ಕವಿ ಸರ್ವಜ್ಞರು ಸಮಾಜಕ್ಕೆ ತಮ್ಮ ತ್ರಿಪದಿಗಳ ಮೂಲಕ ಅಮೋಘ ಕೊಡುಗೆ ನೀಡಿದ್ದಾರೆ. ಜಾತಿ ರಹಿತ, ಕಾಯಕ ಶ್ರದ್ಧೆ, ಮೌಲಿಕ ಶಿಕ್ಷಣ, ಸಂಬAಧಗಳ ಮೌಲ್ಯಗಳು, ಮುಂತಾದವುಗಳನ್ನು ಸರ್ವಜ್ಞರು ತಮ್ಮ ಮೂರು ಸಾಲಿನ ತ್ರಿಪದಿಗಳ ಮೂಲಕ ವಿಡಂಬನಾತ್ಮಕವಾಗಿ ವ್ಯಕ್ತಪಡಿಸಿದರು. ಪ್ರಸ್ತುತ ದಿನಗಳಲ್ಲಿ ನಾವೆಲ್ಲರೂ ಅವರ ತ್ರಿಪದಿಗಳಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ಗುರು-ಹಿರಿಯರು, ಹೆತ್ತವರನ್ನು ಗೌರವಿಸಿ, ನಮ್ಮ ನಮ್ಮ ಕಾಯಕಗಳಲ್ಲಿ ಶ್ರದ್ಧೆಯನ್ನು ತೋರುತ್ತಾ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಮಿಸಿದ್ದ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ  ಸಿದ್ದಲಿಂಗಪ್ಪ ಕೊಟ್ನೇಕಲ್ ಅವರು ಮಾತನಾಡಿ, ಸರ್ವಜ್ಞರು 16ನೇ ಶತಮಾನದವರಾಗಿದ್ದರೂ, ಅವರ ವಚನಗಳು ಇಂದಿಗೂ ಪ್ರಸ್ತುತ ಎನಿಸಿವೆ. ಅಂದಿನ ಕಾಲದಲ್ಲೇ ಮುಂದಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಬೆಳೆಯುವ ಪರಿಯನ್ನು ಊಹಿಸಿದ್ದರು. ತಮ್ಮ ವಚನಗಳಲ್ಲಿ ರೈಲ್ವೇ, ದೂರವಾಣಿಗಳ ಬಗ್ಗೆ ಉಲ್ಲೇಖಿಸಿದ್ದರು. ಮನುಷ್ಯ ಬಡತನ ಹಾಗೂ ಶ್ರೀಮಂತಿಕೆ ಬಂದಾಗ ಹೇಗೆ ವರ್ತಿಸಬೇಕು, ಗುರು-ಹಿರಿಯರು, ತಂದೆ-ತಾಯಿಯನ್ನು ಗೌರವಿಸುವುದು, ಮಾನವೀಯ ಸಂಬAಧಗಳನ್ನು ಕಾಪಾಡಿಕೊಳ್ಳುವುದು, ಸ್ನೇಹ, ಸಹವಾಸಗಳಿಂದ ಬದುಕಿನಲ್ಲಾಗುವ ಪರಿಣಾಮಗಳು, ಮುಂತಾದವುಗಳ ಬಗ್ಗೆ ತಮ್ಮ ವಚನಗಳಲ್ಲಿ ವಿಮರ್ಶಾತ್ಮಕವಾಗಿ, ಅರ್ಥಗರ್ಭಿತವಾಗಿ ತಿಳಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ವಿಶ್ವ ವಿದ್ಯಾಲಯಗಳಲ್ಲಿನ ಅಧ್ಯಯನ ಪೀಠಗಳಲ್ಲಿ ಸರ್ವಜ್ಞರ ಕುರಿತು ಹೆಚ್ಚಿನ ಅಧ್ಯಯನಕ್ಕೆ ಒತ್ತು ನೀಡಬೇಕು. ಇನ್ನಷ್ಟು ಅಧ್ಯಯನದ ಮೂಲಕ ಸರ್ವಜ್ಞರ ವಚನಗಳನ್ನು ಬೆಳಕಿಗೆ, ದಿನ ನಿತ್ಯದ ಬಳಕೆಗೆ ತರಬೇಕು. ವಿದ್ಯಾರ್ಥಿಗಳಲ್ಲಿ ವಚನಗಳ ಅಧ್ಯಯನದ ಬಗ್ಗೆ ಆಸಕ್ತಿ ಹೆಚ್ಚಿಸಬೇಕು. ಬದುಕಿನ ಮೌಲ್ಯಗಳನ್ನು ತಿಳಿಸುವ ಶರಣರ, ಸಂತರ ವಚನಗಳು ನಮ್ಮ ದಿನನಿತ್ಯದ ಜೀವನದ ಭಾಗವಾಗಬೇಕು ಎಂದು ಅಭಿಪ್ರಾಯ ಪಟ್ಟರು.
ಸಮಾಜದ ಮುಖಂಡರಾದ ತವರು ಮೀಡಿಯಾದ ದೇವಿಕಾ ಕುಂಬಾರ ಹಾಗೂ ಶಾಂತಿನಿಕೇತನ ಶಾಲೆಯ ಅಧ್ಯಕ್ಷರಾದ ಶಿವಕುಮಾರ ಕುಕನೂರ ಅವರು ಸರ್ವಜ್ಞ ಹಾಗೂ ಅವರ ವಚನಗಳ ಬಗ್ಗೆ ಮಾತನಾಡಿದರು.
ಸುರೇಶ ಕುಂಬಾರ ಅವರು ನಿರೂಪಿಸಿದರು, ಶ್ರೀ ಅಭಿನವ ಸುಗಮ ಸಂಗೀತ ಕಲಾತಂಡ ಹಾಗೂ ಬಾಷಾ ಹಿರೇಮನಿ ಹಾಗೂ ತಂಡದವರು ಸುಗಮ ಸಂಗೀತ ಮತ್ತು  ನಾಡಗೀತೆ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಸಮಾಜದ ಜಿಲ್ಲಾ ಅಧ್ಯಕ್ಷರಾದ ಕಳಕಪ್ಪ ಕುಂಬಾರ, ತಾಲ್ಲೂಕಾ ಕುಂಬಾರ ಸಂಘದ ಅಧ್ಯಕ್ಷರಾದ ಅಂದಪ್ಪ ಕುಂಬಾರ, ಗುರುರಾಜ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಮೆರವಣಿಗೆ:
ಸಂತ ಕವಿ ಸರ್ವಜ್ಞ ಜಯಂತಿ ಅಂಗವಾಗಿ ವೇದಿಕೆ ಕಾರ್ಯಕ್ರಮದ ನಂತರ ನಗರದ ಸಾಹಿತ್ಯ ಭವನದಿಂದ ಅಶೋಕವೃತ್ತ, ಆಜಾದ್ ವೃತ್ತ ಮಾರ್ಗವಾಗಿ ಪ್ಯಾಟಿ ಈಶ್ವರ ದೇವಸ್ಥಾನದವರೆಗೂ ಸರ್ವಜ್ಞರ ಭಾವಚಿತ್ರದ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಸಮಾಜದ ಜಿಲ್ಲಾ ಅಧ್ಯಕ್ಷರಾದ ಕಳಕಪ್ಪ ಕುಂಬಾರ, ತಾಲ್ಲೂಕಾ ಕುಂಬಾರ ಸಂಘದ ಅಧ್ಯಕ್ಷರಾದ ಅಂದಪ್ಪ ಕುಂಬಾರ, ಗುರುರಾಜ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: