ಕನಕಗಿರಿ ಉತ್ಸವ: ಮೆರವಣಿಗೆ ಸಮಿತಿ ಸಭೆ
: ಕನಕಗಿರಿ ಉತ್ಸವ-2024ರ ಹಿನ್ನೆಲೆಯಲ್ಲಿ ಸಿದ್ದತೆಗಾಗಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಮಂಗಳವಾರದAದು ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಮೆರವಣಿಗೆ ಸಮಿತಿ ಅಧ್ಯಕ್ಷರಾದ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್.ಅವರ ಅಧ್ಯಕ್ಷತೆಯಲ್ಲಿ ಮೆರವಣಿಗೆಯ ಸಮಿತಿ ಸಭೆ ನಡೆಯಿತು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ತಿಪ್ಪಣ್ಣ ಶಿರಸಗಿ, ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮಾರ್ಕಂಡಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಹಾಗೂ ಗಂಗಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
Comments are closed.