ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

Get real time updates directly on you device, subscribe now.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಾರ್ಚ್ 01 ರಿಂದ ಮಾರ್ಚ್ 03 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ಮಾರ್ಚ್ 01 ರಂದು ಬೆಳಿಗ್ಗೆ 06.30 ಗಂಟೆಗೆ ಕನಕಗಿರಿಯ ಬಸವೇಶ್ವರ ಸರ್ಕಲ್ ನಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್‌ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಪುರುಷ ಹಾಗೂ ಮಹಿಳಾ ಮುಕ್ತ ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 10 ಗಂಟೆಗೆ ಕನಕಗಿರಿಯ ಎಪಿಎಂಸಿ ಆವರಣದ ಸಿಸಿ ರಸ್ತೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಮಹಿಳೆಯರ ರಂಗೋಲಿ ಸ್ಪರ್ಧೆಯನ್ನು ವೀಕ್ಷಿಸುವರು. ರಾತ್ರಿ 09.30 ಗಂಟೆಗೆ ಕನಕಗಿರಿಯಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿ 10 ಗಂಟೆಗೆ ಕಾರಟಗಿಗೆ ತೆರಳಿ ವಾಸ್ತವ್ಯ ಮಾಡುವರು.
ಮಾರ್ಚ್ 02 ರಂದು ಬೆಳಿಗ್ಗೆ 08 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಬೆಳಿಗ್ಗೆ 08.30 ಕ್ಕೆ ಕನಕಗಿರಿಗೆ ಆಗಮಿಸುವರು. ಬೆಳಿಗ್ಗೆ 09 ಗಂಟೆಯಿAದ ಕನಕಗಿರಿ ಉತ್ಸವ-2024 ರ ಮೆರವಣಿಗೆ, ಮುಖ್ಯಮಂತ್ರಿಯವರಿAದ ಕಾರ್ಯಕ್ರಮ ಉದ್ಘಾಟನೆ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಕಾರ್ಯಕ್ರಮದ ನಂತರ ಕನಕಗಿರಿಯಲ್ಲಿ ವಾಸ್ತವ್ಯ ಮಾಡುವರು.
ಮಾರ್ಚ್ 03 ರಂದು ಕನಕಗಿರಿ ಉತ್ಸವ-2024 ರ ಉತ್ಸವದ ಕಾರ್ಯಕ್ರಮಗಳು ಹಾಗೂ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಅಂದು ರಾತ್ರಿ ಕನಕಗಿರಿಯಲ್ಲಿ ವಾಸ್ತವ್ಯ ಮಾಡುವರು. ಮುಂದಿನ ಕಾರ್ಯಕ್ರಮಗಳನ್ನು ನಂತರ ತಿಳಿಸಲಾಗುವುದು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: