ಕೊಪ್ಪಳ ಬಿಜೆಪಿ ಲೋಕಸಭಾ ಟಿಕೇಟ್ ಡಾ.ಬಸವರಾಜ್ ಕ್ಯಾವಟರ್‌ಗೆ ಘೋಷಣೆ

Get real time updates directly on you device, subscribe now.

ಕೊಪ್ಪಳ : ಅಚ್ಚರಿಯ ಬೆಳವಣಿಗೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿಯಾಗಿ ಡಾ. ಬಸವರಾಜ್ ಕ್ಯಾವಟರ್ ಇವರ ಹೆಸರನ್ನು ಘೋಷಣೆ ಮಾಡಲಾಗಿದೆ. ಇಂದು ಲೋಕಸಭಾ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಪ್ರಕಟಿಸಿದ್ದು ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಸಂಸದ ಕರಡಿ ಸಂಗಣ್ಣ ಈ ಸಲ ಟಿಕೇಟ್ ಸಿಗುವ ಭರವಸೆಯಲ್ಲಿದ್ದರು . ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಸಂಸದ ಕರಡಿ ಸಂಗಣ್ಣನವರ ಅಭಿಮಾನಿಗಳಿಗೆ ನಿರಾಸೆಯಾಗುವಂತಾಗಿದೆ.

ಕರ್ನಾಟಕದಲ್ಲಿ ಟಿಕೆಟ್ ಪಡೆದವರು

ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ

ಬಾಗಲಕೋಟೆ: ಪಿ.ಸಿ ಗದ್ದಿಗೌಡರ

ಬಿಜಾಪುರ: ರಮೇಶ ಜಿಗಜಿಣಗಿ

ಗುಲ್ಬರ್ಗ: ಡಾ. ಉಮೇಶ್ ಜಾಧವ್‌

ಬೀದರ್: ಭಗವಂತ ಖೂಬಾ

ಕೊಪ್ಪಳ: ಬಸವರಾಜ ಕ್ಯಾವತ್ತೂರ

ಬಳ್ಳಾರಿ: ಶ್ರೀರಾಮುಲು

ಹಾವೇರಿ: ಬಸವರಾಜ ಬೊಮ್ಮಾಯಿ

ಧಾರವಾಡ: ಪ್ರಲ್ಹಾದ ಜೋಶಿ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ: ಬಿ.ವೈ ರಾಘವೇಂದ್ರ

ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ

ತುಮಕೂರು: ವಿ. ಸೋಮಣ್ಣ

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಚಾಮರಾಜನಗರ: ಎಸ್‌. ಬಾಲರಾಜ್‌

ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್‌

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್‌

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ

Get real time updates directly on you device, subscribe now.

Comments are closed.

error: Content is protected !!
%d bloggers like this: