ಸಾಹಿತ್ಯಿಕ ಸಾಂಸ್ಕೃತಿಕ ಸಂಘಟಕ ರಾಜಶೇಖರ್ ಅಂಗಡಿ ಇನ್ನಿಲ್ಲ

Get real time updates directly on you device, subscribe now.

ರಾಜಶೇಖರ ಗುಡದೀರಪ್ಪ ಅಂಗಡಿ(52)
ಸಾ.ಹಲಗೇರಿ,ತಾ.ಜಿ.ಕೊಪ್ಪಳ

ಜನನ -01-06-1972
ನಿಧನ-23-03-2024

ಉದ್ಯೋಗ: ಹತ್ತಿ ವ್ಯಾಪಾರಿ

ಸಂಘಟನೆಗಳಲ್ಲಿ ಸಕ್ರಿಯ:

1) ತಿರುಳ್ಗನ್ನಡ ಕ್ರಿಯಾ ಸಮಿತಿ ಸ್ಥಾಪಕರಲ್ಲಿ ಒಬ್ಬರು

2) ಕೊಪ್ಪಳ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಣೆ

3) ಕೊಪ್ಪಳ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಣೆ

4) 2016 ರ ಫೆ.29 ರಂದು ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಅತ್ಯಧಿಕ ಮತಗಳ ಅಂತರದಿಂದ ಚುನಾಯಿತರಾಗಿ ಆಯ್ಕೆ

ಪ್ರಮುಖ ಕಾರ್ಯಗಳು-ಹೋರಾಟಗಳು

*ಕೊಪ್ಪಳ ಜಿಲ್ಲಾ ರಚನಾ ಹೋರಾಟದಲ್ಲಿ ಭಾಗಿ

*ಅಂಗಡಿ -ಮುಂಗಟ್ಟು,ಬ್ಯಾಂಕುಗಳ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆ,ತ್ರಿಭಾಷಾ ಸೂತ್ರ ಅಳವಡಿಕೆ ಹೋರಾಟ

*ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಿ ಕೊಪ್ಪಳ ಸುತ್ತಮುತ್ತಲಿನ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಒತ್ತಾಯಿಸಿ‌ ಹೋರಾಟ

*ಹೈದ್ರಾಬಾದ್ ಕರ್ನಾಟಕ 371 (ಜೆ) ಸಂವಿಧಾನ ತಿದ್ದುಪಡಿಗೆ ಆಗ್ರಹಿಸಿ ಹೋರಾಟ

*ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ಪ್ರಾರಂಭಕ್ಕೆ ವಿರೋಧಿಸಿ ಅರೆಬೆತ್ತಲೆ ಹೋರಾಟ

*ಕೊಪ್ಪಳ ಜಿಲ್ಲಾ ಹಾಗೂ ತಾಲೂಕು ಸಮ್ಮೇಳನಗಳ ಯಶಸ್ವಿ ಆಯೋಜನೆ

*2011 ರಲ್ಲಿ ಗಂಗಾವತಿಯಲ್ಲಿ ಜರುಗಿದ 78 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಯಲ್ಲಿ ಪ್ರಮುಖ ಪಾತ್ರ

*ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ವಿ ನಿರ್ವಹಣೆ

*ರಂಗಸೇತು ಸಂಘಟನೆ ಮೂಲಕ ಕೊಪ್ಪಳದಲ್ಲಿ ನೀನಾಸಂ ಹಾಗೂ ಶಿವಸಂಚಾರ ಮತ್ತಿತರ ಹೊಸ ಅಲೆಯ ನಾಟಕಗಳ ಪ್ರದರ್ಶನ ಆಯೋಜನೆ

*ಕೊಪ್ಪಳ ಸ್ವಾತಂತ್ರ್ಯ ಸಮರ ನಾಟಕದಲ್ಲಿ ಸುರಪುರದ ವೆಂಟಪ್ಪನಾಯಕ, ಬಿ.ಸಿ.ಪಾಟೀಲ ವಿರಚಿತ ಕಾಯಕಯೋಗಿ ನಾಟಕದಲ್ಲಿ ಅಕ್ಕಮಹಾದೇವಿ ಪಾತ್ರದಲ್ಲಿ ಮನೋಜ್ಞ ಅಭಿನಯ.

Get real time updates directly on you device, subscribe now.

Comments are closed.

error: Content is protected !!
%d bloggers like this: