ಏ.4 ರಂದು ನಡೆಯಬೇಕಿದ್ದ ಬಾಲ್ಯವಿವಾಹದಿಂದ 5 ಬಾಲಕಿಯರ ರಕ್ಷಣೆ

Get real time updates directly on you device, subscribe now.

  ಕೊಪ್ಪಳ ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಡೆಯಬೇಕಾಗಿದ್ದ 5 ಅಪ್ರಾಪ್ತ ವಯಸ್ಸಿನ ಬಾಲಕಿಯರ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಡೆಯಲಾಗಿದ್ದು, ಬಾಲಕಿಯರ ಪೋಷಣೆ ಮತ್ತು ರಕ್ಷಣೆಗಾಗಿ ಉದ್ದೇಶದಿಂದ ಅವರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.

ಏಪ್ರಿಲ್ 04 ರಂದು ಜಿನ್ನಾಪುರ ತಾಂಡಾದ ಶ್ರೀ ಮರಿಯಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ವೈಯಕ್ತಿಕ ವಿವಾಹಗಳಲ್ಲಿ 5 ಅಪ್ರಾಪ್ತ ವಯಸ್ಸಿನ ಬಾಲಕಿಯರ ವಿವಾಹವನ್ನು ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ-1098/112 ಗೆ ಕರೆ ಬಂದ ಹಿನ್ನೆಲೆಯಲ್ಲಿ, ಜಿನ್ನಾಪುರ ತಾಂಡಾಕ್ಕೆ ಅಂಗನವಾಡಿ ಮೇಲ್ವಿಚಾರಕಿಯಾದ ಮಂಜುಳಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಕಾಶಿಮಠ ಹಾಗೂ ಶಿವಲೀಲಾ ವನ್ನೂರು ಮತ್ತು 112 ಪೊಲೀಸ್ ಇಲಾಖೆಯ ಸಿಬ್ಬಂದಿಗಳು ತುರ್ತಾಗಿ ಸ್ಥಳಕ್ಕೆ ಧಾವಿಸಿ, ಬಾಲಕಿಯ ಮನೆಗೆ ಭೇಟಿ ಮಾಡಿ ವಿಚಾರಿಸಿ ದಾಖಲೆಗಳನ್ನು ಪರಿಶೀಲಿಸಿದ್ದು, ವಿವಾಹವನ್ನು ಮಾಡುತ್ತಿರುವುದು ತಿಳಿದು ಬಂದಿರುತ್ತದೆ.
ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಕುರಿತು ಹಾಗೂ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ತಿಳುವಳಿಕೆಯನ್ನು ನೀಡಿ, ಐವರು ಬಾಲಕಿಯರಿಗೆ 18 ವರ್ಷ (ಜನ್ಮ ದಿನಾಂಕ: (1) 27.07.2006 ವಯಸ್ಸು :17-ವರ್ಷ 8 ತಿಂಗಳು, (2) 01.07.2008 ವಯಸ್ಸು: 15 ವರ್ಷ, (3) 10.04.2008 ವಯಸ್ಸು: 15 ವರ್ಷ 11 ತಿಂಗಳು, (4) 15.08.2009 ವಯಸ್ಸು:14 ವರ್ಷ 7 ತಿಂಗಳು, (5) 26.11.2006 ವಯಸ್ಸು :17 ವರ್ಷ 4 ತಿಂಗಳು) ಪೂರ್ಣಗೊಳ್ಳದ ಕಾರಣ ಬಾಲಕಿಯರನ್ನು ರಕ್ಷಿಸಿ, ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: