ಜವಾಬ್ದಾರಿಗಳನ್ನು ಅರಿತು ಚುನಾವಣಾ ಕೆಲಸ ಮಾಡಿ: ಮಲ್ಲಿಕಾರ್ಜುನ ತೊದಲಬಾಗಿ

Get real time updates directly on you device, subscribe now.

ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುವಂತೆ ಕನಕಗಿರಿ ಸಹಾಯಕ ಚುನಾವಣಾ ಅಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಹೇಳಿದರು.
ಮಂಗಳವಾರದAದು ಕನಕಗಿರಿ ಪಟ್ಟಣದ ಗುಗ್ಗಳ ಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಚುನಾವಣಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
FST, SST, VST, VVT     ತಂಡದವರು ತಮಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುವಂತೆ ತಿಳಿಸಿದರು.
ನಂತರ ಎಲ್ಲಾ ಗ್ರಾ.ಪಂ ಪಿಡಿಓರವರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮೂಲಸೌಕರ್ಯವನ್ನು ಒದಗಿಸಲು ಹಾಗೂ ಚೆಕ್ ಪೋಸ್ಟ್ಗಳಲ್ಲಿ ಅಗತ್ಯ ಸೌಕರ್ಯವನ್ನು ಕಲ್ಪಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್, ಕನಕಗಿರಿ/ಕಾರಟಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಚುನಾವಣಾ ಸಿಬ್ಬಂದಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: