ಪೂಜಾರ ಕುಟುಂಬದ ನವ ವಧು-ವರರಿಂದ ಮತದಾನ ಜಾಗೃತಿ

Get real time updates directly on you device, subscribe now.

ತಾಲ್ಲೂಕು ಸ್ವೀಪ್ ಸಮಿತಿಯಿಂದ ಗುರುವಾರಂದು ಭಾಗ್ಯನಗರದ ಬಾಲಾಜಿ ಫಂಕ್ಷನ್ ಹಾಲ್‌ನಲ್ಲಿ ನಡೆದ ಹಾದರಮಗ್ಗಿ ಗ್ರಾಮದ ಪೂಜಾರ ಕುಟುಂಬದ ಸಹೋದರರ ವಿವಾಹ ಸಮಾರಂಭದಲ್ಲಿ ವಿನೂತನ ಸ್ವೀಪ್ ಕಾರ್ಯಕ್ರಮ ಜರುಗಿತು.
ವಿವಾಹ ಸಮಾಂಭದಲ್ಲಿ ಮೇ-7ರಂದು ಲೋಕಸಭಾ ಚುನಾವಣೆ ಜರುಗಲಿರುವ ಪ್ರಯುಕ್ತ ನಮ್ಮ ಮತ, ನಮ್ಮ ಹಕ್ಕು, ಪ್ರತಿ ಮತ ಅತ್ಯಮೂಲ್ಯ ತಪ್ಪದೇ ಮತದಾನ ಮಾಡಿ, ನನ್ನ ಮತ ಮಾರಾಟಕ್ಕಿಲ್ಲ, ಮತ ಚಲಾಯಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಇತ್ಯಾದಿ ಸ್ಲೋಗನ್‌ಗಳನ್ನು ಒಳಗೊಂಡ ಬಟಿಂಗ್ಸ್ ಮೂಲಕ ನವ ವಧು-ವರರು ಮತದಾನ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ರವರು ನವ ವಧು ವರರಿಗೆ ಅಕ್ಷತೆ ಹಾಕುವದರ ಮೂಲಕ ಶುಭ ಹಾರೈಸಿದರು. ಕಡ್ಡಾಯವಾಗಿ ಮೇ-7ರಂದು ತಪ್ಪದೇ ಮತ ಚಲಾಯಿಸಿರೆಂದು ಪೂಜಾರ ಕುಟುಂಬದವರಿಗೆ ಹಾಗೂ ಹಾಜರಿದ್ದವರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಐಇಸಿ ಸಂಯೋಜಕರು, ಕಿನ್ನಾಳ ಪಂಚಾಯತ್ ಅಭಿವೃದ್ದಿ ಅಧಿಕಾರಿ, ತಾಲೂಕ ಸ್ವೀಪ್ ಸಮಿತಿಯ ಸದಸ್ಯರು, ಇನ್ನಿತರ

Get real time updates directly on you device, subscribe now.

Comments are closed.

error: Content is protected !!
%d bloggers like this: