ಲೋಕಸಭಾ ಚುನಾವಣೆಯ ಯಶಸ್ವಿಗೆ ಎಲ್ಲಾ ಸಿದ್ಧತೆ ಪರಿಪೂರ್ಣವಾಗಿ ಮಾಡಿಕೊಳ್ಳಿ: ನಲಿನ್ ಅತುಲ್

Get real time updates directly on you device, subscribe now.

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಹಾಯಕ ಚುನಾವಣಾ ಅಧಿಕಾರಿಗಳು ಎಲ್ಲಾ ಸಿದ್ಧತೆಗಳನ್ನು ಯಾವುದೇ ಲೋಪ ಆಗದಂತೆ ಪರಿಪೂರ್ಣವಾಗಿ  ಸಿದ್ದತೆ ಮಾಡಿಕೊಳ್ಳುವಂತೆ  ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಸಹಾಯಕ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ (ಎ.ಆರ್.ಓ) ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎ.ಆರ್.ಓ.ಗಳು ಪ್ರತಿದಿನ ರೊಟೇಷನ್ ಪ್ರಕಾರ ಚೆಕ್‌ಪೋಸ್ಟ್ಗಳಿಗೆ ಭೇಟಿ ನೀಡಿ ಚೆಕ್‌ಪೋಸ್ಟ್ ಕಾರ್ಯಚರಣೆ, ಎಫ್.ಎಸ್.ಟಿ., ಎಸ್.ಎಸ್.ಟಿ ತಂಡಗಳ ಕಾರ್ಯಚರಣೆ ಬಗ್ಗೆ ಪರಿಶೀಲನೆ ನಡೆಸಬೇಕು. ಎಫ್.ಎಸ್.ಟಿ., ಎಸ್.ಎಸ್.ಟಿ ತಂಡಗಳು ತಮ್ಮ ಶಿಫ್ಟ್ ಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಬಾರ್ಡರ್ ಮತ್ತು ಹೈವೆಯಲ್ಲಿರುವ ಚೆಕ್‌ಪೋಸ್ಟ್ಗಳಿಗೆ ಅಬಕಾರಿ ಇಲಾಖೆಯಿಂದ ಸಿಬ್ಬಂದಿಗಳನ್ನು ನೀಡುವಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಲ್ಲದೇ ಹೋಮ್ ಗಾರ್ಡ್ ಗಳನ್ನು  ಸಹ ಚೆಕ್‌ ಪೋಸ್ಟ್ ಗಳಿಗೆ ನಿಯೋಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಅರ್ಹ ಮತದಾರ ಮತದಾನದಿಂದ ಹೊರಗೊಳಿಯದಿರಲಿ:* ಕಳೆದ ಬಾರಿ ಕುಷ್ಟಗಿಯ ನಗರ ಪ್ರದೇಶದ ವ್ಯಾಪ್ತಿಯ ಕೆಲವೆಡೆ ಕಡೆಮೆ ಮತದಾನವಾಗಿದ್ದು, ಕಡೆಮೆ ಮತದಾನವಾದ ಮತಗಟ್ಟೆ ವ್ಯಾಪ್ತಿಯಲ್ಲಿ ಹೆಚ್ಚು ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಯಾವುದೇ ಅರ್ಹ ಮತದಾರರ ಮತದಾನದಿಂದ ಹೊರಗೊಳಿಯದಂತೆ ನೋಡಿಕೊಳ್ಳಬೇಕಾಗಿದ್ದು, ಎಲ್ಲಾ ಮತದಾರರಿಗೆ ಮತದಾನದ ಮಾಡುವ ಬಗ್ಗೆ ಹಾಗೂ ಅದರ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ವೋಟರ್ ಸ್ಲಿಪ್ ವಿತರಣೆ ಸಂದರ್ಭದಲ್ಲಿ ನಗರ ಪ್ರದೇಶಗಳಲ್ಲಿ ಕೆಲ ಮತದಾರರಿಗೆ ವೋಟರ್ ಸ್ಲಿಪ್ ತಲುಪುವುದಿಲ್ಲ ಎಂಬ ಮಾಹಿತಿ ಇದ್ದು, ಬಿ.ಎಲ್.ಓ.ಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಮನೆಗಳು ಮತ್ತು ಮತದಾರರ ಸಂಖ್ಯೆ ಬಗ್ಗೆ ಮಾಹಿತಿ ಇರಬೇಕು. ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಬಿ.ಎಲ್.ಓ.ಗಳೊಂದಿಗೆ ಸಭೆ ಮಾಡಿ, ಸೂಕ್ತ ನಿರ್ದೇಶನ ನೀಡಬೇಕು. ಬಿ.ಎಲ್.ಓ.ಗಳು ಮತದಾರರ ಮನೆಗೆ ಭೇಟಿ ನೀಡಿ, ವೋಟಲ್ ಸ್ಲಿಪ್  100%  ವಿತರಿಸುವಂತೆ ಕ್ರಮ ಕೈಗೊಳ್ಳಬೇಕು. ಹೋಮ್ ವೋಟಿಂಗ್ ಕುರಿತಂತೆ ರೂಟ್‌ಮ್ಯಾಪ್ ಸಿದ್ಧಪಡಿಸಿಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಬೆಕು ಎಂದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ, ಎಸ್.ಎಸ್.ಟಿ., ಎಫ್.ಎಸ್.ಟಿ., ವಿ.ಎಸ್.ಟಿ. ಎಲ್ಲಾ ಬಿ.ಎಲ್.ಓ ಹಾಗೂ ಇತರ ತಂಡಗಳಿಗೆ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ತರಬೇತಿ ನೀಡಬೇಕು. ತರಬೇತಿ ಸಮಯದಲ್ಲಿ ಎಲ್ಲಾ ಸಿಬ್ಬಂದಿಗಳಿಗೆ ಗುಣಮಟ್ಟದ ಊಟೋಪಹಾರ ವ್ಯವಸ್ಥೆ ಮಾಡಿಕೊಡಬೇಕು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ , ಸಹಾಯಕ ಚುನಾವಣಾಧಿಕಾರಿಗಳಾದ ರೇಷ್ಮಾ ಹಾನಗಲ್, ಮಲ್ಲಪ್ಪ ತೊದಲಬಾಗಿ, ರುದ್ರೇಶಪ್ಪ ಟಿ.ಎಸ್. ಹಾಗೂ ಅನ್ನಪೂರ್ಣ ಮುದುಕಮ್ಮನವರ ಸೇರಿದಂತೆ ತಹಶೀಲ್ದಾರರು, ಸಂಬಂಧಿಪಟ್ಟ ಇಲಾಖೆಗಳು, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: