ದೇವರ ದಾಸಿಮಯ್ಯ ಜಯಂತಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

Get real time updates directly on you device, subscribe now.

: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಸಮಾಜದ ಮುಖಂಡರಾದ ಶಿವಶಂಕರಪ್ಪ ಚನ್ನಿ, ನಾರಾಯಣಪ್ಪ ವಿ ಕೊಳ್ಳಿ, ವೆಂಕಟೇಶ ಗುಡಸಲಿ ತಾವರಗೇರಾ, ಶಿವು ಮಧುಕುಂಟಿ ಕಿನ್ನಾಳ, ಶಿವಶಂಕರ ವಿ ಕಡಣಕಲ್, ಶಶಿಧರ ಸಕ್ರಿ, ಮಂಜುನಾಥ ಎಸ್ ಹನಮಸಾಗರ, ವೀರೇಶ ಅರಳಿಕಟ್ಟಿ, ಚಿದಾನಂದ ಕಾಳಪ್ಪ ಜೂಜಗಾರ, ನಾರಾಯಣಪ್ಪ ಸೇರಿದಂತೆ ಇನ್ನೂ ಹಲವರು ಮತ್ತು ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: