ಲೋಕಸಭಾ ಚುನಾವಣೆ: ಇಂದು 7 ಅಭ್ಯರ್ಥಿಗಳಿಂದ ಒಟ್ಟು 8 ನಾಮಪತ್ರಗಳ ಸಲ್ಲಿಕೆ

Get real time updates directly on you device, subscribe now.

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ ನಾಮಪತ್ರಗಳನ್ನು ಸ್ವೀಕರಿಸಿದರು.
8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12 ರಿಂದ ಆರಂಭವಾಗಿದ್ದು, ಗುರುವಾರದಂದು ಸರ್ವ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಜಿ.ಅನೋಜಿ ರಾವ್ ಅವರು 1 ನಾಮಪತ್ರ, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಶಂಕರ್ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಕೆ.ಬಸವರಾಜ ಅವರು 2 ನಾಮಪತ್ರಗಳು ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿ ಬಸಪ್ಪ, ಮೊಹ್ಮದ್ ನಜೀರುದ್ದೀನ್ ಮೂಲಿಮನಿ, ಕಾಳಪ್ಪ ಹಾಗೂ ಕರಿಂಪಾಶಾ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದು, ಈ ಏಳು ಅಭ್ಯರ್ಥಿಗಳಿಂದ ಒಟ್ಟು 8 ಚುನಾವಣಾ ನಾಮಪತ್ರಗಳು ಐದನೇ ದಿನ ಸಲ್ಲಿಕೆಯಾಗಿವೆ.

Get real time updates directly on you device, subscribe now.

Comments are closed.

error: Content is protected !!
%d bloggers like this: