ಕಾಂಗ್ರೆಸ್ ಸೇರಿದ ಜೆಡಿಎಸ್ ತಾಲೂಕ ಅಧ್ಯಕ್ಷ ಶೇಖ್ ನಬಿಸಾಬ್
ಗಂಗಾವತಿ : ಮಾಜಿ ನಗರಸಭೆ ಸದಸ್ಯರು ಮತ್ತು ಜೆಡಿಎಸ್ ತಾಲೂಕ ಅಧ್ಯಕ್ಷ ಶೇಖ್ ನಬಿಸಾಬ್ ಬಸವಾಪಟ್ಟಣ ದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಸಂಸದರಾದ ಸಂಗಣ್ಣ ಕರಡಿ, ಕಾಡಾ ಅಧ್ಯಕ್ಷರು ಹಸನ್ ಸಾಬ ದೋಟಿಹಾಳ, ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಟಿ. ಜನಾರ್ಧನ ಹುಲಿಗಿ, ಗಂಗಾವತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಮ್ಮಿ ಫಕೀರಪ್ಪ ಸೇರಿದಂತೆ ಅನೇಕ ಮುಖಂಡರು ಉಪಸ್ಥತರಿದ್ದರು