ಲೋಕಸಭಾ ಚುನಾವಣೆ ಮತ ಎಣಿಕೆ : ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

ಆದೇಶದನ್ವಯ ಮತ ಎಣಿಕಾ ಕೇಂದ್ರವಾದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು ಆವರಣವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಚುನಾವಣಾ ಕರ್ತವ್ಯದಲ್ಲಿ ನಿರತರಾದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಚುನಾವಣಾ ಅಭ್ಯರ್ಥಿಗಳು, ಎಣಿಕಾ ಏಜೆಂಟರು ಹಾಗೂ ಪಾಸ್ ಹೊಂದಿರುವ ಮಾಧ್ಯಮದವರಿಗೆ ಮಾತ್ರ ಮತ ಎಣಿಕಾ ಕೇಂದ್ರದಲ್ಲಿ ಪ್ರವೇಶಕ್ಕೆ ಅವಕಾಶವಿರುತ್ತದೆ. ಈ ಸಮಯದಲ್ಲಿ ಜಿಲ್ಲೆಯಾದ್ಯಂತ ವಿಜಯೋತ್ಸವ ಆಚರಣೆ, ದ್ವನಿವರ್ಧಕಗಳನ್ನು ಬಳಸುವುದು, ಮೆರವಣಿಗೆ ಮಾಡುವುದು, ಪಟಾಕಿ ಗಳನ್ನು ಸಿಡಿಸುವುದನ್ನು ನಿರ್ಬಂಧಿಸಲಾಗಿದೆ.
ಆದೇಶವು ಮದುವೆ, ಶವ ಸಂಸ್ಕಾರ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Comments are closed.