ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ :  ಫಲಿತಾಂಶ ಪ್ರಕಟ

Get real time updates directly on you device, subscribe now.

 ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಮಾಧ್ಯಮ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ವಿಜೇತರನ್ನು ಇಂದು ಘೋಷಿಸಲಾಗಿದೆ.
ಪ್ರಜಾವಾಣಿ/ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಹೆಚ್. ಫಕ್ರುದ್ಧೀನ್ ಪ್ರಥಮ, ಬಾಗಲಕೋಟೆಯ ಹಳ್ಳಿ ಸಂದೇಶ ಪತ್ರಿಕೆಯ ಇಂದ್ರಕುಮಾರ್ ಬಿ.ದಸ್ತೇನವರ ದ್ವಿತೀಯ, ಮೂಡಬಿದಿರೆಯ ಹವ್ಯಾಸಿ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ತೃತೀಯ, ಸಮಾಧಾನಕರ ಬಹುಮಾನಕ್ಕೆ ಇಬ್ಬರು ಆಯ್ಕೆಯಾಗಿದ್ದು ಉಡುಪಿಯ ಉದಯವಾಣಿ ಪತ್ರಿಕೆಯ ಅಸ್ಟೊçà ಮೋಹನ್ ಹಾಗೂ ಬೆಂಗಳೂರಿನ ಸಂಜೆ ಸಮಯ ಪತ್ರಿಕೆಯ ಪೂರ್ಣಿಮಾ ರವಿ ಮತ್ತು ವಿಶೇಷ ಬಹುಮಾನಕ್ಕೆ ಸಹ ಇಬ್ಬರು ಆಯ್ಕೆಯಾಗಿದ್ದು, ಮೈಸೂರಿನ ವಿಜಯವಾಣಿ ಪತ್ರಿಕೆಯ ಕೆ.ಹೆಚ್ ಚಂದ್ರು ಹಾಗೂ ಕಲಬುರಗಿಯ ವಿಜಯ ಕರ್ನಾಟಕ ಪತ್ರಿಕೆಯ ಶಿವಶರಣಪ್ಪ ಬೆನ್ನೂರ್ ಅವರು ವಿಜೇತರಾಗಿದ್ದಾರೆ.
ರಾಜ್ಯಮಟ್ಟದ ಈ ಛಾಯಾಚಿತ್ರ ಸ್ಪರ್ಧೆಯ ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ.ಸೂರ್ಯಸೇನ್, ಐ.ಎಫ್.ಎಸ್, ಸದಸ್ಯರಾಗಿ ರಾಜ್ಯಮಟ್ಟದ ಸ್ವೀಪ್ ಹಿರಿಯ ಸಮಾಲೋಚಕರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಪಿ.ಎಸ್.ವಸ್ತçದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾಚಿತ್ರ ವಿಭಾಗದ ಅಧಿಕಾರಿ ಚಂದ್ರಶೇಖರ್, ನಿವೃತ್ತ ಹಾಗೂ ಹಿರಿಯ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಹಾಯಕ ನಿರ್ದೇಶಕರಾದ ಜಡಿಯಪ್ಪ ಗೆದ್ಲಗಟ್ಟಿ ಅವರನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ನೇಮಿಸಲಾಗಿತ್ತು.
ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತದಲ್ಲಿ ಜರುಗಿತ್ತು. ಜಗತ್ತಿನ ಅತಿದೊಡ್ಡ ಪ್ರಜಾಪಭುತ್ವ ದೇಶವಾಗಿರುವ ನಮ್ಮ ಭಾರತದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆ – 2019 ಹಾಗೂ ಸಾರ್ವತ್ರಿಕ ಕರ್ನಾಟಕ ವಿಧಾನಸಭೆ  ಚುನಾವಣೆ-2023 ರ ಸಂದರ್ಭದಲ್ಲಿ ಸಹ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾ ಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

Get real time updates directly on you device, subscribe now.

Comments are closed.

error: Content is protected !!
%d bloggers like this: