ಸಿ.ಇ.ಟಿ ಪರೀಕ್ಷಾ ಫಲಿತಾಂಶವನ್ನು ಶೀಘ್ರ ಪ್ರಕಟಿಸಲು ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಆಗ್ರಹ
ಈ ಬಾರಿ ಸಿ.ಇ.ಟಿ ಪರೀಕ್ಷೆಯಲ್ಲಿ ಉಂಟಾದ ಗೊಂದಲವು ಇಡೀ ಶೈಕ್ಷಣಿಕ ವರ್ಷ ಪ್ರಾರಂಭಗೊಳ್ಳುವಲ್ಲಿ ಸಮಸ್ಯೆ ಸೃಷ್ಟಿಸಿದೆ. ಕಾಮೆಡ್- ಕೆ ನ ಫಲಿತಾಂಶ ಬಂದಾಗಿಯೂ ಇಂದಿಗೂ ಸಿ.ಇ.ಟಿ ಫಲಿತಾಂಶ ಪ್ರಕಟಿಸಲಾಗಿಲ್ಲ. ಒಂದೆಡೆ ಸಿ.ಇ.ಟಿ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಸೇರಿಸಿರುವುದು ವಿದ್ಯಾರ್ಥಿಗಳಲ್ಲಿ ತೀರ್ವ ಆತಂಕ ಸೃಷ್ಟಿಸಿತ್ತು ಈಗ ಸಿ.ಇ.ಟಿ ಫಲಿತಾಂಶ ತಡವಾಗುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮತ್ತಷ್ಟು ಆತಂಕ ಮಡುಗಟ್ಟಿದೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದ ತಡವಾಗಿದ್ದ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಪ್ರತಿ ವರ್ಷವೂ ಸರಿದೂಗಿಸುವ ಯತ್ನ ನಡೆದಿತ್ತು. ಆದರೆ ಈ ಬಾರಿ ಕೆ.ಇ.ಎ ಸೃಷ್ಟಿಸಿದ ಸಮಸ್ಯೆಯಿಂದ ಮತ್ತೇ ಶೈಕ್ಷಣಿಕ ವರ್ಷ ಪ್ರಾರಂಭವಾಗಲು ತಡವಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಯ ಮೇಲೆ ಇದು ದುಷ್ಪರಿಣಾಮ ಬೀರಲಿದೆ ಎಂದು ಎ.ಐ.ಡಿ.ಎಸ್.ಓ ಕಳವಳ ವ್ಯಕ್ತಪಡಿಸುತ್ತದೆ. ಈ ಕೂಡಲೇ ಸಿ.ಇ.ಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿ, ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಎ.ಐ.ಡಿ.ಎಸ್.ಓ ಸರ್ಕಾರವನ್ನು ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಆಗ್ರಹ ಒತ್ತಾಯಿಸು
Comments are closed.