ನಾಳೆಯಿಂದ ಉದ್ಯೋಗ ಕೌಶಲ್ಯ ತರಬೇತಿ

Get real time updates directly on you device, subscribe now.

ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಬೆಂಗಳೂರಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ವಾಧ್ವಾನಿ ಫೌಂಡೇಷನ್ ಸಹಭಾಗಿತ್ವದಲ್ಲಿ ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿ‌ನ ಆಶ್ರಯದಲ್ಲಿ ಆರ್ಟಿಫಿಸಿಯಲ್ ಇಂಟಲಿಜೆನ್ಸಿ ಆಧಾರಿತ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರ ಜೂನ್ 5 ಮತ್ತು 6 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ.ತಿಮ್ಮಾರಡ್ಡಿ ಮೇಟಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 5 ರಂದು ಬೆಳಗ್ಗೆ 9-30ಕ್ಕೆ ಕಾರ್ಯಾಗಾರವನ್ನು ಕಾಲೇಜು ಶಿಕ್ಷಣ ಇಲಾಖೆ ಕಲಬುರಗಿಯ ಪ್ರಾದೇಶಿಕ ಕಚೇರಿಯ ಜಂಟೀ ನಿರ್ದೇಶಕ ಪ್ರೊ.ಗೊಳ್ಳೆ ಶಿವಶರಣ.ಬಿ. ಉದ್ಘಾಟಿಸಲಿದ್ದಾರೆ. ಸಹಾಯಕ ನಿರ್ದೇಶಕ ರಾಜೇಂದ್ರ ಸಿಂಧೆ, ವಿಶೇಷ ಅಧಿಕಾರಿಗಳಾದ ಡಾ.ಬಿ.ಸರೋಜಾ, ಡಾ.ಸೂರ್ಯಕಾಂತ ಉಮ್ಮಾಪುರೆ ಅತಿಥಿಗಳಾಗಿ ಪಾಲ್ಗೊಳ್ಳುವರು. ವಾಧ್ವಾನಿ ಫೌಂಡೇಶನ್‌ನ ಮಾಸ್ಟರ್ ಟ್ರೇನರ್ ಕು.ಸ್ವಾತಿ ಪುತ್ರನ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡುವರು ಎಂದು ಅವರು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: