ಗ್ರಂಥಾಲಯವು ವಿದ್ಯಾರ್ಥಿಗಳನ್ನು ಆಕರ್ಷಿಸುವಂತೆ ಮಾಡಿ : ಸಿಇಓ ರಾಹುಲ್ ರತ್ನಂ ಪಾಂಡೆಯ

Get real time updates directly on you device, subscribe now.

 

  ಗ್ರಾಮ ಪಂಚಾಯತಿಯಲ್ಲಿನ ಗ್ರಂಥಾಲಯ  ಮತ್ತು ಮಾಹಿತಿ ಕೇಂದ್ರವು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಕರ್ಷಣೆ ಮಾಡುವಂತೆ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಸೂಚಿಸಿದರು.
ಗುರುವಾರದಂದು ಜಿಲ್ಲಾ ಪಂಚಾಯತ್‌ನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಗ್ರಂಥಾಲಯ ಮೇಲ್ವಿಚಾರಕರಿಗೆ ಬಾಕಿ ಇರುವ ಕರವಸೂಲಿಯಲ್ಲಿ ಶೇ.6 ರಷ್ಟನ್ನು 09 ತಿಂಗಳಿAದ ಕನಿಷ್ಠ ವೇತನದ ಕಾರ್ಮಿಕ ಇಲಾಖೆಯ ವ್ಯತ್ಯಾಸದ ಹಣ ಹಾಗೂ ತುಟ್ಟಿ ಭತ್ಯೆಯನ್ನು ಗ್ರಾಮ ಪಂಚಾಯತಿಯಿAದ ಭರಿಸಬೇಕು. ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಾಲ ಕಾಲಕ್ಕೆ ಗ್ರಂಥಾಲಯ ಮೇಲ್ವಿಚಾರಕರ ವೇತನವನ್ನು ಶಾಸನಬದ್ಧ ಖಾತೆಗೆ ಜಮಾ ಆದ ತಕ್ಷಣವೇ ಪಾವತಿಸಬೇಕು. ಗ್ರಂಥಾಲಯಕ್ಕೆ ಸುಸಜ್ಜಿತವಾದ ಕಟ್ಟಡ ವ್ಯವಸ್ಥೆ  ಮಾಡಬೇಕು. ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರೂ  ಮೊಬೈಲ್ ಆ್ಯಪ್ ಆಧಾರಿತ ಹಾಜರಾತಿಯನ್ನು ಅಳವಡಿಸಿಕೊಳ್ಳಬೇಕು. ಡಿಜಿ  ವಿಕಾಸನ್ ಶಿಕ್ಷಣ ಫೌಂಡೇಶನ್ ಹಾಗೂ ಟಾಟಾ ಟ್ರಸ್ಟ್ ವತಿಯಿಂದ ನಡೆಯುವ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಲು ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರಿಗೆ ಗ್ರಂಥಾಲಯಕ್ಕೆ ಮಕ್ಕಳನ್ನು ಕಳುಹಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಶಿಕ್ಷಣ ಫೌಂಡೇಶನ್ ವತಿಯಿಂದ ಗ್ರಾಮ ಡಿಜಿ ವಿಕಾಸನ್ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ 65 ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಅನುಷ್ಠಾನ ಮಾಡಲಾಗಿದೆ. ಆ ಕಾರ್ಯಕ್ರಮಕ್ಕೆ ಡಿಜಿಟಲ್ ಸಂಪನ್ಮೂಲಗಳನ್ನು ಈಗಾಗಲೇ ನೀಡಲಾಗಿದೆ. ಎರಡನೆಯ ಹಂತದಲ್ಲಿ 21 ಗ್ರಂಥಾಲಯಗಳಿಗೆ ಮಾನಿಟರ್, ಸ್ಪೀಕರ್, ಟಿವಿ ಸ್ಟಿಕ್, ಮೊಬೈಲ್‌ಗಳನ್ನು ವಿತರಣೆ ಮಾಡಲಾಗಿದೆ. ಈ ಸಂಪನ್ಮೂಲಗಳಲ್ಲಿ 8, 9, 10, 12 ನೇ ತರಗತಿಗಳ ವಿಡಿಯೋ ಪಾಠಗಳನ್ನು ಹಾಕಲಾಗಿದೆ. ವಿದ್ಯಾರ್ಥಿಗಳ ನಿರಂತರ ಬಳಕೆಯ ಮೂಲಕ ತರಗತಿಯ ವಿಷಯಾಂಶಗಳನ್ನು ಕಲಿಕೆಯ ಪುನಶ್ಚೇತನ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಕೌಶಲ್ಯಗಳ ಕುರಿತು ಶಿಕ್ಷಣ ಪಿಡಿಯಾ ಮೂಲಕ ಕಲಿತುಕೊಳ್ಳಲು ಡಿಜಿಟಲ್ ಸಂಪನ್ಮೂಲಗಳು ಗ್ರಂಥಾಲಯಕ್ಕೆ ಬರುವವರಿಗೆ ಅನುಕೂಲಕರವಾಗಿದೆ ಎಂದು ಜಿಲ್ಲಾ ಸಂಯೋಜಕರಾದ ಬಸವರಾಜ ಬಡಿಗೇರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿಗಳಾದ  ಮಲ್ಲಿಕಾರ್ಜುನ ತೊದಲಬಾಗಿ, ಜಿ.ಪಂ. ಆಡಳಿತ ವಿಭಾಗದ ಸಹಾಯಕ ನಿರ್ದೇಶಕರಾದ ಶರಣು ಪೂಜಾರ, ಜಿಲ್ಲಾ ಗ್ರಂಥಾಲಯದ ಮುಖ್ಯ ಗ್ರಂಥಪಾಲಕರಾದ ಯಮನೂರ, ವ್ಯವಸ್ಥಾಪಕರಾದ ನಿವೇದಿತಾ ಭಂಡಾರಿ ಸೇರಿದಂತೆ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: